3:22 AM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

“ಶರ್ಮಿಷ್ಠೆ” ನಾಟಕ ವೀಕ್ಷಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ: ಉಮಾಶ್ರೀ ಭಾವಪೂರ್ಣ ಅಭಿನಯಕ್ಕೆ ಫಿದಾ

23/06/2025, 21:30

ಮೈಸೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬೇಲೂರು ರಘುನಂದನ್‌ ವಿರಚಿತ, ಚಿದಂಬರ ರಾವ್‌ ಜಂಬೆ ನಿರ್ದೇಶಿಸಿರುವ ಹಿರಿಯ ನಟಿ ಉಮಾಶ್ರೀ ಅವರ ಅಭಿನಯದ “ಶರ್ಮಿಷ್ಠೆ” ನಾಟವನ್ನು ಭಾನುವಾರ ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯಲ್ಲಿ ವೀಕ್ಷಿಸಿದರು.


ಈ ವೇಳೆ ಮಾತನಾಡಿದ ಅವರು, ಬಹುಮುಖ ಪ್ರತಿಭೆ ಉಮಾಶ್ರೀ ಅವರು ಭಾವಪೂರ್ಣವಾದ ಅಭಿನಯ ನಮ್ಮೆನ್ನೆಲ್ಲ ಒಂದು ಗಂಟೆ ಕಾಲ ಭಾವಪರವಶಗೊಳಿಸಿದೆ. ಇಬ್ಬರು ಪರಮಾಪ್ತ ಸ್ನೇಹಿತರ ವಿಭಿನ್ನವಾದ ನಡೆ, ನುಡಿಗಳು ಹಾಗೂ ಸಂಘರ್ಷದ ಸನ್ನಿವೇಶಗಳ ಮನೋಜ್ಞವಾದ ನಟನೆ ನಿಜಕ್ಕೂ ಪ್ರಶಂಸನೀಯ ಎಂದರು.
ಕಷ್ಟದ ದಿನಗಳಿಂದ ಬೆಳೆದು ಬಂದಿರುವ ಉಮಾಶ್ರೀ ಅವರು ಜೀವನದ ಅನೇಕ ಮಜಲುಗಳನ್ನು ಹತ್ತಿರದಿಂದ ಕಂಡಿದ್ದಾರೆ. ನಾಟಕದಲ್ಲೂ ಕೂಡ ಎಲ್ಲಿಯೂ ಏರಿಳಿತಗಳಿಲ್ಲದೆ ಅತ್ಯುತ್ತಮವಾಗಿ ಏಕಪಾತ್ರದಲ್ಲಿ ಅಭಿನಯಿಸಿ ಪಾತ್ರಕ್ಕೆ ಜೀವತುಂಬಿದ್ದಾರೆ. ಅವರ ಅಪ್ರತಿಮಾ ಕಲಾಪ್ರತಿಭೆಯನ್ನು ಈ ನಾಟಕದ ಮೂಲಕ ಅಭಿವ್ಯಕ್ತಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜಕೀಯದಲ್ಲಿಯೂ ಕೂಡ ಮಹಿಳಾ ಮತ್ತು ಮಕ್ಕಳ ಸಚಿವೆಯಾಗಿ ಮಹಿಳಾ ಪರವಾಗಿ ಉತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರ ಬಗ್ಗೆ ಆಸಕ್ತಿವಹಿಸಿ ಅನೇಕ ಕೊಡುಗೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಕೂಡ ಚಳುವಳಿಯ ಮೂಲಕ ತಮ್ಮ ಜವಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ರಂಗಕ್ಷೇತ್ರಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಂದೇಶಗಳನ್ನು ಸಾರುವ ಮೂಲಕ ಮಹತ್ತರವಾದ ಬದಲಾವಣೆಯನ್ನು ಜಾರಿಮಾಡುವಂತಹ ವೇದಿಕೆಗಳಾಗಿವೆ. ಇಂತಹ ಕೆಲಸಗಳಿಗೆ ಪ್ರೇರಕ ಶಕ್ತಿಯಾಗಿ ಉಮಾಶ್ರೀ ಹಾಗೂ ಮಂಡ್ಯ ರಮೇಶ್ ಅವರಂತಹ ಕಲಾವಿದರ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು