2:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

“ಶರ್ಮಿಷ್ಠೆ” ನಾಟಕ ವೀಕ್ಷಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ: ಉಮಾಶ್ರೀ ಭಾವಪೂರ್ಣ ಅಭಿನಯಕ್ಕೆ ಫಿದಾ

23/06/2025, 21:30

ಮೈಸೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಬೇಲೂರು ರಘುನಂದನ್‌ ವಿರಚಿತ, ಚಿದಂಬರ ರಾವ್‌ ಜಂಬೆ ನಿರ್ದೇಶಿಸಿರುವ ಹಿರಿಯ ನಟಿ ಉಮಾಶ್ರೀ ಅವರ ಅಭಿನಯದ “ಶರ್ಮಿಷ್ಠೆ” ನಾಟವನ್ನು ಭಾನುವಾರ ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯಲ್ಲಿ ವೀಕ್ಷಿಸಿದರು.


ಈ ವೇಳೆ ಮಾತನಾಡಿದ ಅವರು, ಬಹುಮುಖ ಪ್ರತಿಭೆ ಉಮಾಶ್ರೀ ಅವರು ಭಾವಪೂರ್ಣವಾದ ಅಭಿನಯ ನಮ್ಮೆನ್ನೆಲ್ಲ ಒಂದು ಗಂಟೆ ಕಾಲ ಭಾವಪರವಶಗೊಳಿಸಿದೆ. ಇಬ್ಬರು ಪರಮಾಪ್ತ ಸ್ನೇಹಿತರ ವಿಭಿನ್ನವಾದ ನಡೆ, ನುಡಿಗಳು ಹಾಗೂ ಸಂಘರ್ಷದ ಸನ್ನಿವೇಶಗಳ ಮನೋಜ್ಞವಾದ ನಟನೆ ನಿಜಕ್ಕೂ ಪ್ರಶಂಸನೀಯ ಎಂದರು.
ಕಷ್ಟದ ದಿನಗಳಿಂದ ಬೆಳೆದು ಬಂದಿರುವ ಉಮಾಶ್ರೀ ಅವರು ಜೀವನದ ಅನೇಕ ಮಜಲುಗಳನ್ನು ಹತ್ತಿರದಿಂದ ಕಂಡಿದ್ದಾರೆ. ನಾಟಕದಲ್ಲೂ ಕೂಡ ಎಲ್ಲಿಯೂ ಏರಿಳಿತಗಳಿಲ್ಲದೆ ಅತ್ಯುತ್ತಮವಾಗಿ ಏಕಪಾತ್ರದಲ್ಲಿ ಅಭಿನಯಿಸಿ ಪಾತ್ರಕ್ಕೆ ಜೀವತುಂಬಿದ್ದಾರೆ. ಅವರ ಅಪ್ರತಿಮಾ ಕಲಾಪ್ರತಿಭೆಯನ್ನು ಈ ನಾಟಕದ ಮೂಲಕ ಅಭಿವ್ಯಕ್ತಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜಕೀಯದಲ್ಲಿಯೂ ಕೂಡ ಮಹಿಳಾ ಮತ್ತು ಮಕ್ಕಳ ಸಚಿವೆಯಾಗಿ ಮಹಿಳಾ ಪರವಾಗಿ ಉತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರ ಬಗ್ಗೆ ಆಸಕ್ತಿವಹಿಸಿ ಅನೇಕ ಕೊಡುಗೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಕೂಡ ಚಳುವಳಿಯ ಮೂಲಕ ತಮ್ಮ ಜವಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ರಂಗಕ್ಷೇತ್ರಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಂದೇಶಗಳನ್ನು ಸಾರುವ ಮೂಲಕ ಮಹತ್ತರವಾದ ಬದಲಾವಣೆಯನ್ನು ಜಾರಿಮಾಡುವಂತಹ ವೇದಿಕೆಗಳಾಗಿವೆ. ಇಂತಹ ಕೆಲಸಗಳಿಗೆ ಪ್ರೇರಕ ಶಕ್ತಿಯಾಗಿ ಉಮಾಶ್ರೀ ಹಾಗೂ ಮಂಡ್ಯ ರಮೇಶ್ ಅವರಂತಹ ಕಲಾವಿದರ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು