3:29 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಒಳಾಂಗಣ ಕ್ರೀಡಾಂಗಣ ಏಪ್ರಿಲ್‌ನಲ್ಲಿ 15ರೊಳಗೆ ಸಜ್ಜುಗೊಳಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

06/04/2025, 10:12

ಮಂಗಳೂರು(reporterkarnataka.com): ಮಂಗಳೂರು ನಗರದ ಉರ್ವ ಮಾರ್ಕೆಟ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 15ರೊಳಗೆ ಪೂರ್ಣಗೊಳಿಸುವಂತೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು.

ಕ್ರೀಡಾಂಗಣವನ್ನು ಶೀಘ್ರವೇ ಕ್ರೀಡಾ ಚಟುವಟಿಕೆಗಳಿಗೆ ಸಮರ್ಪಿಸಲಾಗುವುದು. ಇದರಿಂದ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಉನ್ನತ ಸೌಲಭ್ಯ ದೊರಕಿದಂತಾಗಲಿದೆ. ಯಾವುದೇ ಕಾರಣಕ್ಕೂ ನಿಗದಿತ ಅವಧಿಯನ್ನು ವಿಳಂಬಿಸುವಂತಿಲ್ಲ ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸಚಿವರಿಗೆ ಮಾಹಿತಿ ನೀಡಿ, ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್, ಕಬಡ್ಡಿ ಕ್ರೀಡೆಗಳಿಗೆ ಒಟ್ಟು 11 ಅಂಕಣ ಲಭ್ಯವಾಗಲಿದೆ. ಕ್ರೀಡಾಪಟುಗಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಅಳವಡಿಸಲಾಗಿದೆ. ವಿಶ್ರಾಂತಿ ಕೊಠಡಿ, ಜಿಮ್, ಕೆಫೆಟೇರಿಯ, ವಾಹನ ಪಾಕಿರ್ಂಗ್ ಮತ್ತಿತರ ಸೌಲಭ್ಯ ಲಭ್ಯವಿದೆ. 3 ಲಿಫ್ಟ್‍ಗಳು ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ 33 ಕೋಟಿ ವೆಚ್ಚದಡಿಯಲ್ಲಿ ಒಳಾಂಗಣ ಕ್ರೀಡಾಂಗಣ ಕಾಮಗಾರಿ ನಡೆಸಲಾಗಿದೆ ಎಂದು ಅವರು ಸಚಿವರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್, ಸುಪ್ರೀತ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು