9:20 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕಾತಿ: ಐವನ್ ಪ್ರಶ್ನೆಗೆ ವಿಧಾನ ಪರಿಷತ್ ನಲ್ಲಿ ಸಚಿವ ಖಂಡ್ರೆ ಉತ್ತರ

12/08/2025, 20:04

ಬೆಂಗಳೂರು (reporterkarnataka.com):ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ- ಆನೆ ಸಂಘರ್ಷ ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ನಿಯಮ 72 ರಡಿ ಕೇಳಲಾದ ಗಮನ‌ ಸೆಳೆಯುವ ಸೂಚನೆಗೆ ಉತ್ತರಿಸಿದ ಅರಣ್ಯ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ- ಆನೆ ಸಂಘರ್ಷ ನಿಯಂತ್ರಿಸುವ ಸಲುವಾಗಿ ಸರ್ಕಾರ ಆನೆ ನಿರೋಧಕ ಕಂದಕ‌ ನಿರ್ಮಾಣ, ನಿರಂತರ ಗಸ್ತು ತಿರುಗುವುದು, ಆನೆಗಳನ್ನು ಮತ್ತೆ ಅರಣ್ಯ ಪ್ರದೇಶಕ್ಕೆ ಓಡಿಸುವುದು, ಕಾಡಾನೆ ಹಾವಳಿ ಇರುವ ಗ್ರಾಮಗಳಲ್ಲಿ ವಾಟ್ಸಪ್ ಗುಂಪು ರಚಿಸಿ ಆನೆ ಹಾವಳಿ ಕುರಿತು ಸಂದೇಶ ನೀಡುವುದು, ಆನೆ ಸಂಚರಿಸುವ ಪ್ರದೇಶಗಳಲ್ಲಿ ಸೂಚನಾ ಫಲಕ‌ ಅಳವಡಿಸುವಂತಹ ಕಾರ್ಯಗಳನ್ನು‌ ಇಲಾಖೆ ಕೈಗೊಂಡಿದೆ. ಸಂಘರ್ಷದ ಸಂದರ್ಭದಲ್ಲಿ ಕಾಡಾನೆಗಳನ್ನು ಸೆರೆಹಿಡಿಯುವ ಸಲುವಾಗಿ ಮೂರು ತಂಡಗಳನ್ನು‌ ರಚಿಸಿದ್ದು ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಸೆರೆಹಿಡಿಯುವ ಕಾರ್ಯಾಚರಣೆ‌ ನಡೆದಲ್ಲಿ ಈ ತಂಡವನ್ನು ನಿಯೋಜಿಸಲಾಗುತ್ತಿದೆ.
ಗಸ್ತು ಅರಣ್ಯ ಪಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಅದರಲ್ಲಿ ಮಂಗಳೂರು ವಿಭಾಗಕ್ಕೆ 21 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಇನ್ನು ಅರಣ್ಯ ವೀಕ್ಷಕ ವೃಂದದಲ್ಲಿ ಖಾಲಿ‌ ಇರುವ ಹುದ್ದೆಗಳನ್ನು ನೇರ ನೇಮಕಾತಿಯಡಿ ಶೀಘ್ರವೇ ಭರ್ತಿ ಮಾಡಲಾಗುವುದೆಂದರು

ಇತ್ತೀಚಿನ ಸುದ್ದಿ

ಜಾಹೀರಾತು