9:33 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕಾತಿ: ಐವನ್ ಪ್ರಶ್ನೆಗೆ ವಿಧಾನ ಪರಿಷತ್ ನಲ್ಲಿ ಸಚಿವ ಖಂಡ್ರೆ ಉತ್ತರ

12/08/2025, 20:04

ಬೆಂಗಳೂರು (reporterkarnataka.com):ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ- ಆನೆ ಸಂಘರ್ಷ ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ನಿಯಮ 72 ರಡಿ ಕೇಳಲಾದ ಗಮನ‌ ಸೆಳೆಯುವ ಸೂಚನೆಗೆ ಉತ್ತರಿಸಿದ ಅರಣ್ಯ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ- ಆನೆ ಸಂಘರ್ಷ ನಿಯಂತ್ರಿಸುವ ಸಲುವಾಗಿ ಸರ್ಕಾರ ಆನೆ ನಿರೋಧಕ ಕಂದಕ‌ ನಿರ್ಮಾಣ, ನಿರಂತರ ಗಸ್ತು ತಿರುಗುವುದು, ಆನೆಗಳನ್ನು ಮತ್ತೆ ಅರಣ್ಯ ಪ್ರದೇಶಕ್ಕೆ ಓಡಿಸುವುದು, ಕಾಡಾನೆ ಹಾವಳಿ ಇರುವ ಗ್ರಾಮಗಳಲ್ಲಿ ವಾಟ್ಸಪ್ ಗುಂಪು ರಚಿಸಿ ಆನೆ ಹಾವಳಿ ಕುರಿತು ಸಂದೇಶ ನೀಡುವುದು, ಆನೆ ಸಂಚರಿಸುವ ಪ್ರದೇಶಗಳಲ್ಲಿ ಸೂಚನಾ ಫಲಕ‌ ಅಳವಡಿಸುವಂತಹ ಕಾರ್ಯಗಳನ್ನು‌ ಇಲಾಖೆ ಕೈಗೊಂಡಿದೆ. ಸಂಘರ್ಷದ ಸಂದರ್ಭದಲ್ಲಿ ಕಾಡಾನೆಗಳನ್ನು ಸೆರೆಹಿಡಿಯುವ ಸಲುವಾಗಿ ಮೂರು ತಂಡಗಳನ್ನು‌ ರಚಿಸಿದ್ದು ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಸೆರೆಹಿಡಿಯುವ ಕಾರ್ಯಾಚರಣೆ‌ ನಡೆದಲ್ಲಿ ಈ ತಂಡವನ್ನು ನಿಯೋಜಿಸಲಾಗುತ್ತಿದೆ.
ಗಸ್ತು ಅರಣ್ಯ ಪಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಅದರಲ್ಲಿ ಮಂಗಳೂರು ವಿಭಾಗಕ್ಕೆ 21 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಇನ್ನು ಅರಣ್ಯ ವೀಕ್ಷಕ ವೃಂದದಲ್ಲಿ ಖಾಲಿ‌ ಇರುವ ಹುದ್ದೆಗಳನ್ನು ನೇರ ನೇಮಕಾತಿಯಡಿ ಶೀಘ್ರವೇ ಭರ್ತಿ ಮಾಡಲಾಗುವುದೆಂದರು

ಇತ್ತೀಚಿನ ಸುದ್ದಿ

ಜಾಹೀರಾತು