7:15 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

Minister Kharge | ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ

14/05/2025, 00:15

ಕಲಬುರಗಿ(reporterkarnataka.com): ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಖಾಜಾ ಬಂದೇನವಾದ್ ದರ್ಗಾದ ಸಂದಲ್ ಮೆರವಣಿಗೆ ಹಾಗೂ ಉರುಸ್ ಹಿನ್ನೆಲೆಯಲ್ಲಿ ಖಾಜಾ ಬಂದೇನವಾಜ್ ದರ್ಗಾದ ಬಳಿ ಆಯೋಜಿಸಲಾಗಿದ್ದ ಅಖಿಲ ಭಾರತ ಕೈಗಾರಿಕಾ ಪ್ರದರ್ಶನ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು.
ಹಿರಿಯ ಸಜ್ಜಾದ ಅವರ ಮಾರ್ಗದರ್ಶನದಂತೆ ಈಗಿನ ಸಜ್ಜಾದ ಅವರು ಹೋಗುತ್ತಿದ್ದಾರೆ. ಅವರ ಈ ಹೊಸ ಪ್ರಯಾಣದಲ್ಲಿ‌ ನಾವು ಅವರೊಂದಿಗೆ ಇರುತ್ತೇವೆ. ನಾವು ಶರಣಬಸವೇಶ್ವರ ದೇವಾಲಯ, ಬುದ್ದ ವಿಹಾರದಷ್ಟೇ ಖಾಜಾ ಬಂದೇನವಾಜ್ ದರ್ಗಾವನ್ನು ಗೌರವಿಸುತ್ತೇವೆ. ಹಾಗಾಗಿ, ಸಜ್ಜಾದ ಅವರು ನಮ್ಮನ್ನು ಬೇರೆಯವರೆಂದು ಪರಿಗಣಿಸಬೇಕಿಲ್ಲ. ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಲು ಅವರೊಂದಿಗೆ ಸದಾ ಇರುತ್ತೇವೆ ಎಂದರು.

ಖಾಜಾ ಬಂದೇನವಾಜ ದರ್ಗಾದ ಸಜ್ಜಾದ್ ನಶೀನ್ ಸೈಯದ್ ಮೊಹಮ್ಮದ್ ಅಲಿb ಅಲ್ ಹುಸೇನಿ ಸಾಹೇಬ್ ಮಾತನಾಡಿ ಸೂಫಿ ಪರಂಪರೆಯ ಹಿನ್ನೆಲೆಯ ಹಜರತ್ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಕೇವಲ ಭಾರತ ಮಾತ್ರವಲ್ಲ ಪ್ರಪಂಚದಲ್ಲೆಲ್ಲ ಪ್ರಸಿದ್ಧವಾಗಿದೆ. ಈ ಬಗ್ಗೆ ಅಧ್ಯಯನ ನಡೆಸಲು ಕೆನಡಾ ಹಾಗೂ ಇಂಗ್ಲೆಂಡ್ ದೇಶದಿಂದ ಪ್ರವಾಸಿಗರು ಬಂದು ಹೋಗಿದ್ದಾರೆ. ಉರುಸ್ ಆಚರಣೆಗಳು ಬಹಳ ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಉರುಸ್ ಸಂದರ್ಭದಲ್ಲಿ ವ್ಯಾಪಾರಸ್ಥರು ಬಂದು ಇಲ್ಲಿ ಅಂಗಡಿಗಳನ್ನು ಹಾಕುತ್ತಿದ್ದಾರೆ. ಇಲ್ಲಿ ಬರುವ ಎಲ್ಲರಿಗೂ ಶುಭವಾಗಲಿ ಎಂದರು.

ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಮಾತನಾಡಿ ಕಲಬುರಗಿಯ ಈ ನೆಲ ಭ್ರಾತೃತ್ವಕ್ಕೆ ಹೆಸರಾಗಿದೆ. ಸೂಫಿ ಹಾಗೂ ಸಂತ ಪರಂಪರೆಯ ಶರಣಬಸವೇಶ್ವರ ಹಾಗೂ ಖಾಜಾ ಬಂದೇನವಾಜ್ ದರ್ಗಾ ಈ ಭಾಗದ ಎರಡು‌ ಪ್ರಮುಖ ಧಾರ್ಮಿಕ ಕೇಂದ್ರಗಳಾಗಿವೆ. ಎಲ್ಲ ಧರ್ಮದ ಜನರು‌ ಇಲ್ಲಿಗೆ ಬಂದು ದರ್ಶನ ಪಡೆದುಕೊಂಡು ಹೋಗುತ್ತಿದ್ದಾರೆ. ಇದು ಸಹೋದರತೆಯ ಸಂಕೇತವಾಗಿದೆ ಎಂದರು.

ವೇದಿಕೆಯ ಮೇಲೆ ಶಾಸಕಿ‌ ಕನೀಜ್ ಫಾತಿಮಾ, ಸೈದಲ್ ಹುಸೇನ್ ಸಾಬ್, ಮಹಜರ್ ಆಲಂ ಖಾನ್ ಸೇರಿದಂತೆ ಹಲವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು