1:16 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Minister Kharge | ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ

14/05/2025, 00:15

ಕಲಬುರಗಿ(reporterkarnataka.com): ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಖಾಜಾ ಬಂದೇನವಾದ್ ದರ್ಗಾದ ಸಂದಲ್ ಮೆರವಣಿಗೆ ಹಾಗೂ ಉರುಸ್ ಹಿನ್ನೆಲೆಯಲ್ಲಿ ಖಾಜಾ ಬಂದೇನವಾಜ್ ದರ್ಗಾದ ಬಳಿ ಆಯೋಜಿಸಲಾಗಿದ್ದ ಅಖಿಲ ಭಾರತ ಕೈಗಾರಿಕಾ ಪ್ರದರ್ಶನ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು.
ಹಿರಿಯ ಸಜ್ಜಾದ ಅವರ ಮಾರ್ಗದರ್ಶನದಂತೆ ಈಗಿನ ಸಜ್ಜಾದ ಅವರು ಹೋಗುತ್ತಿದ್ದಾರೆ. ಅವರ ಈ ಹೊಸ ಪ್ರಯಾಣದಲ್ಲಿ‌ ನಾವು ಅವರೊಂದಿಗೆ ಇರುತ್ತೇವೆ. ನಾವು ಶರಣಬಸವೇಶ್ವರ ದೇವಾಲಯ, ಬುದ್ದ ವಿಹಾರದಷ್ಟೇ ಖಾಜಾ ಬಂದೇನವಾಜ್ ದರ್ಗಾವನ್ನು ಗೌರವಿಸುತ್ತೇವೆ. ಹಾಗಾಗಿ, ಸಜ್ಜಾದ ಅವರು ನಮ್ಮನ್ನು ಬೇರೆಯವರೆಂದು ಪರಿಗಣಿಸಬೇಕಿಲ್ಲ. ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಲು ಅವರೊಂದಿಗೆ ಸದಾ ಇರುತ್ತೇವೆ ಎಂದರು.

ಖಾಜಾ ಬಂದೇನವಾಜ ದರ್ಗಾದ ಸಜ್ಜಾದ್ ನಶೀನ್ ಸೈಯದ್ ಮೊಹಮ್ಮದ್ ಅಲಿb ಅಲ್ ಹುಸೇನಿ ಸಾಹೇಬ್ ಮಾತನಾಡಿ ಸೂಫಿ ಪರಂಪರೆಯ ಹಿನ್ನೆಲೆಯ ಹಜರತ್ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಕೇವಲ ಭಾರತ ಮಾತ್ರವಲ್ಲ ಪ್ರಪಂಚದಲ್ಲೆಲ್ಲ ಪ್ರಸಿದ್ಧವಾಗಿದೆ. ಈ ಬಗ್ಗೆ ಅಧ್ಯಯನ ನಡೆಸಲು ಕೆನಡಾ ಹಾಗೂ ಇಂಗ್ಲೆಂಡ್ ದೇಶದಿಂದ ಪ್ರವಾಸಿಗರು ಬಂದು ಹೋಗಿದ್ದಾರೆ. ಉರುಸ್ ಆಚರಣೆಗಳು ಬಹಳ ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಉರುಸ್ ಸಂದರ್ಭದಲ್ಲಿ ವ್ಯಾಪಾರಸ್ಥರು ಬಂದು ಇಲ್ಲಿ ಅಂಗಡಿಗಳನ್ನು ಹಾಕುತ್ತಿದ್ದಾರೆ. ಇಲ್ಲಿ ಬರುವ ಎಲ್ಲರಿಗೂ ಶುಭವಾಗಲಿ ಎಂದರು.

ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಮಾತನಾಡಿ ಕಲಬುರಗಿಯ ಈ ನೆಲ ಭ್ರಾತೃತ್ವಕ್ಕೆ ಹೆಸರಾಗಿದೆ. ಸೂಫಿ ಹಾಗೂ ಸಂತ ಪರಂಪರೆಯ ಶರಣಬಸವೇಶ್ವರ ಹಾಗೂ ಖಾಜಾ ಬಂದೇನವಾಜ್ ದರ್ಗಾ ಈ ಭಾಗದ ಎರಡು‌ ಪ್ರಮುಖ ಧಾರ್ಮಿಕ ಕೇಂದ್ರಗಳಾಗಿವೆ. ಎಲ್ಲ ಧರ್ಮದ ಜನರು‌ ಇಲ್ಲಿಗೆ ಬಂದು ದರ್ಶನ ಪಡೆದುಕೊಂಡು ಹೋಗುತ್ತಿದ್ದಾರೆ. ಇದು ಸಹೋದರತೆಯ ಸಂಕೇತವಾಗಿದೆ ಎಂದರು.

ವೇದಿಕೆಯ ಮೇಲೆ ಶಾಸಕಿ‌ ಕನೀಜ್ ಫಾತಿಮಾ, ಸೈದಲ್ ಹುಸೇನ್ ಸಾಬ್, ಮಹಜರ್ ಆಲಂ ಖಾನ್ ಸೇರಿದಂತೆ ಹಲವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು