5:59 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

Minister Kharge | ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ

14/05/2025, 00:15

ಕಲಬುರಗಿ(reporterkarnataka.com): ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಖಾಜಾ ಬಂದೇನವಾದ್ ದರ್ಗಾದ ಸಂದಲ್ ಮೆರವಣಿಗೆ ಹಾಗೂ ಉರುಸ್ ಹಿನ್ನೆಲೆಯಲ್ಲಿ ಖಾಜಾ ಬಂದೇನವಾಜ್ ದರ್ಗಾದ ಬಳಿ ಆಯೋಜಿಸಲಾಗಿದ್ದ ಅಖಿಲ ಭಾರತ ಕೈಗಾರಿಕಾ ಪ್ರದರ್ಶನ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು.
ಹಿರಿಯ ಸಜ್ಜಾದ ಅವರ ಮಾರ್ಗದರ್ಶನದಂತೆ ಈಗಿನ ಸಜ್ಜಾದ ಅವರು ಹೋಗುತ್ತಿದ್ದಾರೆ. ಅವರ ಈ ಹೊಸ ಪ್ರಯಾಣದಲ್ಲಿ‌ ನಾವು ಅವರೊಂದಿಗೆ ಇರುತ್ತೇವೆ. ನಾವು ಶರಣಬಸವೇಶ್ವರ ದೇವಾಲಯ, ಬುದ್ದ ವಿಹಾರದಷ್ಟೇ ಖಾಜಾ ಬಂದೇನವಾಜ್ ದರ್ಗಾವನ್ನು ಗೌರವಿಸುತ್ತೇವೆ. ಹಾಗಾಗಿ, ಸಜ್ಜಾದ ಅವರು ನಮ್ಮನ್ನು ಬೇರೆಯವರೆಂದು ಪರಿಗಣಿಸಬೇಕಿಲ್ಲ. ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಲು ಅವರೊಂದಿಗೆ ಸದಾ ಇರುತ್ತೇವೆ ಎಂದರು.

ಖಾಜಾ ಬಂದೇನವಾಜ ದರ್ಗಾದ ಸಜ್ಜಾದ್ ನಶೀನ್ ಸೈಯದ್ ಮೊಹಮ್ಮದ್ ಅಲಿb ಅಲ್ ಹುಸೇನಿ ಸಾಹೇಬ್ ಮಾತನಾಡಿ ಸೂಫಿ ಪರಂಪರೆಯ ಹಿನ್ನೆಲೆಯ ಹಜರತ್ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಕೇವಲ ಭಾರತ ಮಾತ್ರವಲ್ಲ ಪ್ರಪಂಚದಲ್ಲೆಲ್ಲ ಪ್ರಸಿದ್ಧವಾಗಿದೆ. ಈ ಬಗ್ಗೆ ಅಧ್ಯಯನ ನಡೆಸಲು ಕೆನಡಾ ಹಾಗೂ ಇಂಗ್ಲೆಂಡ್ ದೇಶದಿಂದ ಪ್ರವಾಸಿಗರು ಬಂದು ಹೋಗಿದ್ದಾರೆ. ಉರುಸ್ ಆಚರಣೆಗಳು ಬಹಳ ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಉರುಸ್ ಸಂದರ್ಭದಲ್ಲಿ ವ್ಯಾಪಾರಸ್ಥರು ಬಂದು ಇಲ್ಲಿ ಅಂಗಡಿಗಳನ್ನು ಹಾಕುತ್ತಿದ್ದಾರೆ. ಇಲ್ಲಿ ಬರುವ ಎಲ್ಲರಿಗೂ ಶುಭವಾಗಲಿ ಎಂದರು.

ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಮಾತನಾಡಿ ಕಲಬುರಗಿಯ ಈ ನೆಲ ಭ್ರಾತೃತ್ವಕ್ಕೆ ಹೆಸರಾಗಿದೆ. ಸೂಫಿ ಹಾಗೂ ಸಂತ ಪರಂಪರೆಯ ಶರಣಬಸವೇಶ್ವರ ಹಾಗೂ ಖಾಜಾ ಬಂದೇನವಾಜ್ ದರ್ಗಾ ಈ ಭಾಗದ ಎರಡು‌ ಪ್ರಮುಖ ಧಾರ್ಮಿಕ ಕೇಂದ್ರಗಳಾಗಿವೆ. ಎಲ್ಲ ಧರ್ಮದ ಜನರು‌ ಇಲ್ಲಿಗೆ ಬಂದು ದರ್ಶನ ಪಡೆದುಕೊಂಡು ಹೋಗುತ್ತಿದ್ದಾರೆ. ಇದು ಸಹೋದರತೆಯ ಸಂಕೇತವಾಗಿದೆ ಎಂದರು.

ವೇದಿಕೆಯ ಮೇಲೆ ಶಾಸಕಿ‌ ಕನೀಜ್ ಫಾತಿಮಾ, ಸೈದಲ್ ಹುಸೇನ್ ಸಾಬ್, ಮಹಜರ್ ಆಲಂ ಖಾನ್ ಸೇರಿದಂತೆ ಹಲವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು