6:50 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ ಸಚಿವೆ

30/07/2025, 18:04

ಬೆಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ (ಐಸಿಪಿಎಸ್) ಬಾಲಕರ ಬಾಲಮಂದಿರ ಹಾಗೂ ಯಶೋದರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬಾಲಕರ ಬಾಲ ಮಂದಿರದಲ್ಲಿ ವಿವಿಧ ರಾಜ್ಯಗಳಿಂದ 110 ಮಕ್ಕಳಿದ್ದು ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಶೀಲನೆ ನಡೆಸಿದರು. ಮಹಿಳಾ ನಿಲಯ ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೂ ಭೇಟಿ ನೀಡಿದ ಸಚಿವರು, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಇಲಾಖೆಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

* *ಚಿಣ್ಣರನ್ನು ಮುದ್ದಾಡಿದ ಸಚಿವರು*
ಬಳಿಕ ಸರ್ಕಾರಿ ಶಿಶು ಮಂದಿರಕ್ಕೂ ಭೇಟಿ ನೀಡಿದ ಸಚಿವರು, ಶಿಶುಗಳ ಪಾಲನೆ, ಪೋಷಣೆ ಹಾಗೂ ಪುಟಾಣಿಗಳ ಆರೈಕೆ ಕುರಿತು ಪರಿಶೀಲನೆ ನಡೆಸಿದರು.
ಆರು ವರ್ಷದ ಒಳಗಿನ 46 ಮಕ್ಕಳು ಕೇಂದ್ರದಲ್ಲಿದ್ದಾರೆ. ಶಿಶುಗಳ ಉತ್ತಮ ಆರೈಕೆಯು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ಎಂದು ಸಚಿವರು ಹೇಳಿದರು.
ಮಕ್ಕಳ ಪಾಲನೆ ಮಾಡುತ್ತಿರುವ ಸಿಬ್ಬಂದಿ ವರ್ಗದವರ ಕಾರ್ಯವೈಖರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಚಿಣ್ಣರನ್ನು‌ ಎತ್ತಿಕೊಂಡು ಮುದ್ದಾಡಿದರು.
ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಉಪ ನಿರ್ದೇಶಕರಾದ ಸುಮಂಗಲಾ ಮಳಾಪುರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು