4:33 AM Tuesday11 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು