8:53 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು