7:34 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು