4:33 AM Saturday22 - March 2025
ಬ್ರೇಕಿಂಗ್ ನ್ಯೂಸ್
Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ… 23.24 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಕರ್ನಾಟಕ ಬಂದ್: ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ BJP MLAS SUSPENDED | ಸ್ಪೀಕರ್ ಪೀಠಕ್ಕೆ ಅಗೌರವ: ಡಾ. ಭರತ್ ಶೆಟ್ಟಿ,… ಹನಿಟ್ರ್ಯಾಪ್ ಪ್ರಕರಣ: ವಿಧಾನ ಸಭೆಯಲ್ಲಿ ಬಿಜೆಪಿ- ಜೆಡಿಎಸ್ ನಿಂದ ಭಾರೀ ಪ್ರತಿಭಟನೆ; ಸ್ಫೀಕರ್… ಅಂಗನವಾಡಿ ಆಹಾರ ಗುಣಮಟ್ಟದ ನಿರ್ಲಕ್ಷ್ಯ ವಹಿಸಿದರೆ ಉಪನಿರ್ದೇಶಕರ ಮೇಲೆ ಕ್ರಮ: ಸಚಿವೆ ಲಕ್ಷ್ಮೀ… ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ… ಶಿವಮೊಗ್ಗ ಜನೌಷಧಿ ಕೇಂದ್ರದಲ್ಲಿ ಇತರ ಔಷಧಿ, ಮಾತ್ರೆಗಳ ಮಾರಾಟ: ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ…

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು