8:58 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು