9:45 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು