1:41 PM Tuesday4 - August 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು