12:02 AM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

20/03/2025, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಮೃತಳನ್ನು ವರ್ಷಿಣಿ (15) ಎಂದು ಗುರುತಿಸಲಾಗಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯರ ಪ್ರಕಾರ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ ಪರೀಕ್ಷಾ ಫಲಿತಾಂಶದ ಭಯದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಳು. ಈ ದಾರುಣ ಘಟನೆ ಕುಟುಂಬ ಮತ್ತು ಸುತ್ತಮುತ್ತಲಿನ ಜನರನ್ನು ಶೋಕ ಸಮುದ್ರದಲ್ಲಿ ಮುಳುಗಿಸಿದೆ.
ಪೋಷಕರು ಮತ್ತು ಶಿಕ್ಷಕರಿಗೆ ವಿದ್ಯಾರ್ಥಿಗಳ ಮನಸ್ಥಿತಿಯ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನ ಹಾಗೂ ಪ್ರೇರಣೆ ನೀಡುವ ಮೂಲಕ ಇಂತಹ ಅನಾಹುತಗಳನ್ನು ತಪ್ಪಿಸಲು ಸಾಧ್ಯ.

ಇತ್ತೀಚಿನ ಸುದ್ದಿ

ಜಾಹೀರಾತು