12:22 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024 ; ಮಿಂಚಿದ ಕರಾವಳಿಯ ವನಿತೆಯರಿಗೆ ಸನ್ಮಾನ

05/09/2024, 12:42

ಮಂಗಳೂರು(ReporterKarnataka.com) : ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಫ್ಯಾಷನ್‌ ಶೋ ಆ.29ರಿಂದ 3 ದಿನಗಳ ಕಾಲ ನಡೆದಿದ್ದು, ವಿಜೇತರಾದ ಕರಾವಳಿಯ ವನಿತೆಯರಿಗೆ ಅಭಿನಂದನಾ ಕಾರ್ಯಕ್ರಮ ನಗರದ ಮಾಯಾ ಹೋಟೆಲ್‌ನಲ್ಲಿ ಬುಧವಾರ ನಡೆಯಿತು.

ಮಿಸೆಸ್ ಇಂಡಿಯಾ ಇಂಡಿಪೆಂಡೆಂಟ್ ಇಂಟರ್ ನ್ಯಾಷನಲ್ ಕಿರೀಟವನ್ನು ಡಾ. ನಿಶಿತಾ ಶೆಟ್ಟಿಯಾನ್, ಮಿಸೆಸ್ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್ ಕಿರೀಟವನ್ನು ಡಾ. ಶ್ರುತಿ ಬಲ್ಲಾಳ್ ಮುಡಿಗೇರಿಸಿಕೊಂಡಿದ್ದಾರೆ.

ಮಿಸೆಸ್ ಇಂಡಿಯಾ ಕರ್ನಾಟಕ ವಿಭಾಗದಲ್ಲಿ ಡಾ.ರಶ್ಮಾ ಎಂ.ಶೆಟ್ಟಿ ಪ್ರಥಮ ರನ್ನರ್ ಅಪ್, ವಿದ್ಯಾ ಸಂಪತ್ ಕರ್ಕೇರ ದ್ವಿತೀಯ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಬಿತಾ ರಂಜಿತ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡಿದ್ದು ,
ಡಾ.ಅರ್ಚನಾ ಭಟ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ತೃತೀಯ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು.

ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ವಿ.ಕಾಮತ್ ಸೂಪರ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡರು. ದೀಶಲ್ ತೌರೊ ಮಿಸ್ ಇಂಡಿಯಾ ಕರ್ನಾಟಕ ರನ್ನರ್‌ ಅಪ್ ಆಗಿ ಹೊರಹೊಮ್ಮಿದ್ದಾರೆ.

ರಾಜ್ಯದ ನಾನಾ ಭಾಗಗಳಿಂದ ಸುಮಾರು 35 ಸ್ಪರ್ಧಿಗಳು ಈ ಫ್ಯಾಷನ್‌ ಶೋ ನಲ್ಲಿ ಪಾಲ್ಗೊಂಡಿದ್ದರು. 3 ದಿನಗಳ ಸ್ಪರ್ಧೆಯಲ್ಲಿ ಸ್ಪರ್ಧಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಅಲ್ಲದೇ ಸ್ಪರ್ಧಿಗಳು ಲಗೋರಿ, ಖೋ ಖೋ ಮತ್ತು ಗಿಲ್ಲಿದಾಂಡಿನಂತಹ ಸಾಂಪ್ರದಾಯಿಕ ಭಾರತೀಯ ಆಟಗಳಲ್ಲಿ ತೊಡಗಿಸಿಕೊಂಡು, ತಮ್ಮ ಕ್ರೀಡಾ ಮನೋಭಾವ ಪ್ರದರ್ಶಿಸಿದರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರು ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿಯ ಮರ್ಸಿ ವೀಣಾ ಡಿಸೋಜಾ, ಪಾತ್‌ವೇ ಎಂಟರ್ಪ್ರೈಸಸ್‌ನ ದೀಪಕ್ ಗಂಗೂಲಿ, ಉದ್ಯಮಿ ಸುಮಾ ಸುರೇಶ್, ಹಿಂದಿನ ಆವೃತ್ತಿಗಳಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಪಡೆದುಕೊಂಡಿರುವ ಜೂಲಿಯಟ್, ಡಾ.ಜೆಸ್ಸಿ, ಶಾಲೆಟ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು