4:48 AM Friday27 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024 ; ಮಿಂಚಿದ ಕರಾವಳಿಯ ವನಿತೆಯರಿಗೆ ಸನ್ಮಾನ

05/09/2024, 12:42

ಮಂಗಳೂರು(ReporterKarnataka.com) : ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಫ್ಯಾಷನ್‌ ಶೋ ಆ.29ರಿಂದ 3 ದಿನಗಳ ಕಾಲ ನಡೆದಿದ್ದು, ವಿಜೇತರಾದ ಕರಾವಳಿಯ ವನಿತೆಯರಿಗೆ ಅಭಿನಂದನಾ ಕಾರ್ಯಕ್ರಮ ನಗರದ ಮಾಯಾ ಹೋಟೆಲ್‌ನಲ್ಲಿ ಬುಧವಾರ ನಡೆಯಿತು.

ಮಿಸೆಸ್ ಇಂಡಿಯಾ ಇಂಡಿಪೆಂಡೆಂಟ್ ಇಂಟರ್ ನ್ಯಾಷನಲ್ ಕಿರೀಟವನ್ನು ಡಾ. ನಿಶಿತಾ ಶೆಟ್ಟಿಯಾನ್, ಮಿಸೆಸ್ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್ ಕಿರೀಟವನ್ನು ಡಾ. ಶ್ರುತಿ ಬಲ್ಲಾಳ್ ಮುಡಿಗೇರಿಸಿಕೊಂಡಿದ್ದಾರೆ.

ಮಿಸೆಸ್ ಇಂಡಿಯಾ ಕರ್ನಾಟಕ ವಿಭಾಗದಲ್ಲಿ ಡಾ.ರಶ್ಮಾ ಎಂ.ಶೆಟ್ಟಿ ಪ್ರಥಮ ರನ್ನರ್ ಅಪ್, ವಿದ್ಯಾ ಸಂಪತ್ ಕರ್ಕೇರ ದ್ವಿತೀಯ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಬಿತಾ ರಂಜಿತ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡಿದ್ದು ,
ಡಾ.ಅರ್ಚನಾ ಭಟ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ತೃತೀಯ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು.

ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ವಿ.ಕಾಮತ್ ಸೂಪರ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡರು. ದೀಶಲ್ ತೌರೊ ಮಿಸ್ ಇಂಡಿಯಾ ಕರ್ನಾಟಕ ರನ್ನರ್‌ ಅಪ್ ಆಗಿ ಹೊರಹೊಮ್ಮಿದ್ದಾರೆ.

ರಾಜ್ಯದ ನಾನಾ ಭಾಗಗಳಿಂದ ಸುಮಾರು 35 ಸ್ಪರ್ಧಿಗಳು ಈ ಫ್ಯಾಷನ್‌ ಶೋ ನಲ್ಲಿ ಪಾಲ್ಗೊಂಡಿದ್ದರು. 3 ದಿನಗಳ ಸ್ಪರ್ಧೆಯಲ್ಲಿ ಸ್ಪರ್ಧಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಅಲ್ಲದೇ ಸ್ಪರ್ಧಿಗಳು ಲಗೋರಿ, ಖೋ ಖೋ ಮತ್ತು ಗಿಲ್ಲಿದಾಂಡಿನಂತಹ ಸಾಂಪ್ರದಾಯಿಕ ಭಾರತೀಯ ಆಟಗಳಲ್ಲಿ ತೊಡಗಿಸಿಕೊಂಡು, ತಮ್ಮ ಕ್ರೀಡಾ ಮನೋಭಾವ ಪ್ರದರ್ಶಿಸಿದರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರು ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿಯ ಮರ್ಸಿ ವೀಣಾ ಡಿಸೋಜಾ, ಪಾತ್‌ವೇ ಎಂಟರ್ಪ್ರೈಸಸ್‌ನ ದೀಪಕ್ ಗಂಗೂಲಿ, ಉದ್ಯಮಿ ಸುಮಾ ಸುರೇಶ್, ಹಿಂದಿನ ಆವೃತ್ತಿಗಳಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಪಡೆದುಕೊಂಡಿರುವ ಜೂಲಿಯಟ್, ಡಾ.ಜೆಸ್ಸಿ, ಶಾಲೆಟ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು