1:23 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024 ; ಮಿಂಚಿದ ಕರಾವಳಿಯ ವನಿತೆಯರಿಗೆ ಸನ್ಮಾನ

05/09/2024, 12:42

ಮಂಗಳೂರು(ReporterKarnataka.com) : ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಫ್ಯಾಷನ್‌ ಶೋ ಆ.29ರಿಂದ 3 ದಿನಗಳ ಕಾಲ ನಡೆದಿದ್ದು, ವಿಜೇತರಾದ ಕರಾವಳಿಯ ವನಿತೆಯರಿಗೆ ಅಭಿನಂದನಾ ಕಾರ್ಯಕ್ರಮ ನಗರದ ಮಾಯಾ ಹೋಟೆಲ್‌ನಲ್ಲಿ ಬುಧವಾರ ನಡೆಯಿತು.

ಮಿಸೆಸ್ ಇಂಡಿಯಾ ಇಂಡಿಪೆಂಡೆಂಟ್ ಇಂಟರ್ ನ್ಯಾಷನಲ್ ಕಿರೀಟವನ್ನು ಡಾ. ನಿಶಿತಾ ಶೆಟ್ಟಿಯಾನ್, ಮಿಸೆಸ್ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್ ಕಿರೀಟವನ್ನು ಡಾ. ಶ್ರುತಿ ಬಲ್ಲಾಳ್ ಮುಡಿಗೇರಿಸಿಕೊಂಡಿದ್ದಾರೆ.

ಮಿಸೆಸ್ ಇಂಡಿಯಾ ಕರ್ನಾಟಕ ವಿಭಾಗದಲ್ಲಿ ಡಾ.ರಶ್ಮಾ ಎಂ.ಶೆಟ್ಟಿ ಪ್ರಥಮ ರನ್ನರ್ ಅಪ್, ವಿದ್ಯಾ ಸಂಪತ್ ಕರ್ಕೇರ ದ್ವಿತೀಯ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಬಿತಾ ರಂಜಿತ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡಿದ್ದು ,
ಡಾ.ಅರ್ಚನಾ ಭಟ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ತೃತೀಯ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು.

ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ವಿ.ಕಾಮತ್ ಸೂಪರ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡರು. ದೀಶಲ್ ತೌರೊ ಮಿಸ್ ಇಂಡಿಯಾ ಕರ್ನಾಟಕ ರನ್ನರ್‌ ಅಪ್ ಆಗಿ ಹೊರಹೊಮ್ಮಿದ್ದಾರೆ.

ರಾಜ್ಯದ ನಾನಾ ಭಾಗಗಳಿಂದ ಸುಮಾರು 35 ಸ್ಪರ್ಧಿಗಳು ಈ ಫ್ಯಾಷನ್‌ ಶೋ ನಲ್ಲಿ ಪಾಲ್ಗೊಂಡಿದ್ದರು. 3 ದಿನಗಳ ಸ್ಪರ್ಧೆಯಲ್ಲಿ ಸ್ಪರ್ಧಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಅಲ್ಲದೇ ಸ್ಪರ್ಧಿಗಳು ಲಗೋರಿ, ಖೋ ಖೋ ಮತ್ತು ಗಿಲ್ಲಿದಾಂಡಿನಂತಹ ಸಾಂಪ್ರದಾಯಿಕ ಭಾರತೀಯ ಆಟಗಳಲ್ಲಿ ತೊಡಗಿಸಿಕೊಂಡು, ತಮ್ಮ ಕ್ರೀಡಾ ಮನೋಭಾವ ಪ್ರದರ್ಶಿಸಿದರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರು ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿಯ ಮರ್ಸಿ ವೀಣಾ ಡಿಸೋಜಾ, ಪಾತ್‌ವೇ ಎಂಟರ್ಪ್ರೈಸಸ್‌ನ ದೀಪಕ್ ಗಂಗೂಲಿ, ಉದ್ಯಮಿ ಸುಮಾ ಸುರೇಶ್, ಹಿಂದಿನ ಆವೃತ್ತಿಗಳಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಪಡೆದುಕೊಂಡಿರುವ ಜೂಲಿಯಟ್, ಡಾ.ಜೆಸ್ಸಿ, ಶಾಲೆಟ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು