9:18 PM Wednesday12 - November 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಇತ್ತೀಚಿನ ಸುದ್ದಿ

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024 ; ಮಿಂಚಿದ ಕರಾವಳಿಯ ವನಿತೆಯರಿಗೆ ಸನ್ಮಾನ

05/09/2024, 12:42

ಮಂಗಳೂರು(ReporterKarnataka.com) : ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಫ್ಯಾಷನ್‌ ಶೋ ಆ.29ರಿಂದ 3 ದಿನಗಳ ಕಾಲ ನಡೆದಿದ್ದು, ವಿಜೇತರಾದ ಕರಾವಳಿಯ ವನಿತೆಯರಿಗೆ ಅಭಿನಂದನಾ ಕಾರ್ಯಕ್ರಮ ನಗರದ ಮಾಯಾ ಹೋಟೆಲ್‌ನಲ್ಲಿ ಬುಧವಾರ ನಡೆಯಿತು.

ಮಿಸೆಸ್ ಇಂಡಿಯಾ ಇಂಡಿಪೆಂಡೆಂಟ್ ಇಂಟರ್ ನ್ಯಾಷನಲ್ ಕಿರೀಟವನ್ನು ಡಾ. ನಿಶಿತಾ ಶೆಟ್ಟಿಯಾನ್, ಮಿಸೆಸ್ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್ ಕಿರೀಟವನ್ನು ಡಾ. ಶ್ರುತಿ ಬಲ್ಲಾಳ್ ಮುಡಿಗೇರಿಸಿಕೊಂಡಿದ್ದಾರೆ.

ಮಿಸೆಸ್ ಇಂಡಿಯಾ ಕರ್ನಾಟಕ ವಿಭಾಗದಲ್ಲಿ ಡಾ.ರಶ್ಮಾ ಎಂ.ಶೆಟ್ಟಿ ಪ್ರಥಮ ರನ್ನರ್ ಅಪ್, ವಿದ್ಯಾ ಸಂಪತ್ ಕರ್ಕೇರ ದ್ವಿತೀಯ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಬಿತಾ ರಂಜಿತ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡಿದ್ದು ,
ಡಾ.ಅರ್ಚನಾ ಭಟ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ತೃತೀಯ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು.

ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ವಿ.ಕಾಮತ್ ಸೂಪರ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡರು. ದೀಶಲ್ ತೌರೊ ಮಿಸ್ ಇಂಡಿಯಾ ಕರ್ನಾಟಕ ರನ್ನರ್‌ ಅಪ್ ಆಗಿ ಹೊರಹೊಮ್ಮಿದ್ದಾರೆ.

ರಾಜ್ಯದ ನಾನಾ ಭಾಗಗಳಿಂದ ಸುಮಾರು 35 ಸ್ಪರ್ಧಿಗಳು ಈ ಫ್ಯಾಷನ್‌ ಶೋ ನಲ್ಲಿ ಪಾಲ್ಗೊಂಡಿದ್ದರು. 3 ದಿನಗಳ ಸ್ಪರ್ಧೆಯಲ್ಲಿ ಸ್ಪರ್ಧಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಅಲ್ಲದೇ ಸ್ಪರ್ಧಿಗಳು ಲಗೋರಿ, ಖೋ ಖೋ ಮತ್ತು ಗಿಲ್ಲಿದಾಂಡಿನಂತಹ ಸಾಂಪ್ರದಾಯಿಕ ಭಾರತೀಯ ಆಟಗಳಲ್ಲಿ ತೊಡಗಿಸಿಕೊಂಡು, ತಮ್ಮ ಕ್ರೀಡಾ ಮನೋಭಾವ ಪ್ರದರ್ಶಿಸಿದರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರು ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿಯ ಮರ್ಸಿ ವೀಣಾ ಡಿಸೋಜಾ, ಪಾತ್‌ವೇ ಎಂಟರ್ಪ್ರೈಸಸ್‌ನ ದೀಪಕ್ ಗಂಗೂಲಿ, ಉದ್ಯಮಿ ಸುಮಾ ಸುರೇಶ್, ಹಿಂದಿನ ಆವೃತ್ತಿಗಳಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಪಡೆದುಕೊಂಡಿರುವ ಜೂಲಿಯಟ್, ಡಾ.ಜೆಸ್ಸಿ, ಶಾಲೆಟ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು