12:25 AM Monday10 - February 2025
ಬ್ರೇಕಿಂಗ್ ನ್ಯೂಸ್
ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಂಜನಗೂಡು: ಶ್ರೀ ಮುರಗಿ ಸ್ವಾಮಿ ಮಠದ ನೂತನ ಗದ್ದುಗೆ, ರಾಜದ್ವಾರ ಲೋಕಾರ್ಪಣೆ ಮಂಗಳೂರಿನ ವೆನ್ಲಾಕ್ ಗೆ ʼರೀಜನಲ್ ಆಸ್ಪತ್ರೆʼ ಸ್ಥಾನಮಾನ: ಸಿಎಂಗೆ ಸಂಸದ ಕ್ಯಾ. ಬ್ರಿಜೇಶ್… ಇನ್ವೆಸ್ಟ್‌ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಕೈಗಾರಿಕಾ ಸಚಿವ ಎಂ.ಬಿ.… ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಗ್ರಾಂಡ್… ಮೋದಿ – ಶಾ ಜೋಡಿ ದೇಶದಲ್ಲೇ ಮಾಡಿದೆ ಮೋಡಿ: ತೀರ್ಥಹಳ್ಳಿ ವಿಜಯೋತ್ಸವದಲ್ಲಿ ಆರಗ… ಆಪ್‌ ಪಕ್ಷವನ್ನು ದೆಹಲಿ ಜನರು ತಿರಸ್ಕಾರ ಮಾಡಿದ್ದಾರೆ; ಇಂಡಿ ಒಕ್ಕೂಟ ಒಡೆದು ಚೂರಾಗಿದೆ:… ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ… ಮೋದಿ ಸ್ವಚ್ಛ-ಶುದ್ಧ ಆಡಳಿತದಿಂದ ಬಿಜೆಪಿ ಕಂಮ್ ಬ್ಯಾಕ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

ಇತ್ತೀಚಿನ ಸುದ್ದಿ

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024 ; ಮಿಂಚಿದ ಕರಾವಳಿಯ ವನಿತೆಯರಿಗೆ ಸನ್ಮಾನ

05/09/2024, 12:42

ಮಂಗಳೂರು(ReporterKarnataka.com) : ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ಅದ್ಧೂರಿಯಾಗಿ ಜರಗಿದ್ದು, ಕರಾವಳಿಯಿಂದ ಭಾಗವಹಿಸಿದ ವನಿತೆಯರು ಹಲವು ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾ ಕರ್ನಾಟಕ 2024ರ 8ನೇ ಆವೃತ್ತಿಯ ಫ್ಯಾಷನ್‌ ಶೋ ಆ.29ರಿಂದ 3 ದಿನಗಳ ಕಾಲ ನಡೆದಿದ್ದು, ವಿಜೇತರಾದ ಕರಾವಳಿಯ ವನಿತೆಯರಿಗೆ ಅಭಿನಂದನಾ ಕಾರ್ಯಕ್ರಮ ನಗರದ ಮಾಯಾ ಹೋಟೆಲ್‌ನಲ್ಲಿ ಬುಧವಾರ ನಡೆಯಿತು.

ಮಿಸೆಸ್ ಇಂಡಿಯಾ ಇಂಡಿಪೆಂಡೆಂಟ್ ಇಂಟರ್ ನ್ಯಾಷನಲ್ ಕಿರೀಟವನ್ನು ಡಾ. ನಿಶಿತಾ ಶೆಟ್ಟಿಯಾನ್, ಮಿಸೆಸ್ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್ ಕಿರೀಟವನ್ನು ಡಾ. ಶ್ರುತಿ ಬಲ್ಲಾಳ್ ಮುಡಿಗೇರಿಸಿಕೊಂಡಿದ್ದಾರೆ.

ಮಿಸೆಸ್ ಇಂಡಿಯಾ ಕರ್ನಾಟಕ ವಿಭಾಗದಲ್ಲಿ ಡಾ.ರಶ್ಮಾ ಎಂ.ಶೆಟ್ಟಿ ಪ್ರಥಮ ರನ್ನರ್ ಅಪ್, ವಿದ್ಯಾ ಸಂಪತ್ ಕರ್ಕೇರ ದ್ವಿತೀಯ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಬಿತಾ ರಂಜಿತ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡಿದ್ದು ,
ಡಾ.ಅರ್ಚನಾ ಭಟ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ತೃತೀಯ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು.

ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ವಿ.ಕಾಮತ್ ಸೂಪರ್ ಕ್ಲಾಸಿಕ್ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಮುಡಿಗೇರಿಸಿಕೊಂಡರು. ದೀಶಲ್ ತೌರೊ ಮಿಸ್ ಇಂಡಿಯಾ ಕರ್ನಾಟಕ ರನ್ನರ್‌ ಅಪ್ ಆಗಿ ಹೊರಹೊಮ್ಮಿದ್ದಾರೆ.

ರಾಜ್ಯದ ನಾನಾ ಭಾಗಗಳಿಂದ ಸುಮಾರು 35 ಸ್ಪರ್ಧಿಗಳು ಈ ಫ್ಯಾಷನ್‌ ಶೋ ನಲ್ಲಿ ಪಾಲ್ಗೊಂಡಿದ್ದರು. 3 ದಿನಗಳ ಸ್ಪರ್ಧೆಯಲ್ಲಿ ಸ್ಪರ್ಧಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಅಲ್ಲದೇ ಸ್ಪರ್ಧಿಗಳು ಲಗೋರಿ, ಖೋ ಖೋ ಮತ್ತು ಗಿಲ್ಲಿದಾಂಡಿನಂತಹ ಸಾಂಪ್ರದಾಯಿಕ ಭಾರತೀಯ ಆಟಗಳಲ್ಲಿ ತೊಡಗಿಸಿಕೊಂಡು, ತಮ್ಮ ಕ್ರೀಡಾ ಮನೋಭಾವ ಪ್ರದರ್ಶಿಸಿದರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರು ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿಯ ಮರ್ಸಿ ವೀಣಾ ಡಿಸೋಜಾ, ಪಾತ್‌ವೇ ಎಂಟರ್ಪ್ರೈಸಸ್‌ನ ದೀಪಕ್ ಗಂಗೂಲಿ, ಉದ್ಯಮಿ ಸುಮಾ ಸುರೇಶ್, ಹಿಂದಿನ ಆವೃತ್ತಿಗಳಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಕಿರೀಟ ಪಡೆದುಕೊಂಡಿರುವ ಜೂಲಿಯಟ್, ಡಾ.ಜೆಸ್ಸಿ, ಶಾಲೆಟ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು