11:36 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Missing | ಫರಂಗಿಪೇಟೆ: ಅಪ್ರಾಪ್ತ ವಯಸ್ಸಿನ ಪಿಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ಪೊಲೀಸ್ ಹೊರ ಠಾಣೆಗೆ ಗ್ರಾಮಸ್ಥರ ಮುತ್ತಿಗೆ

27/02/2025, 21:34

ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ಫರಂಗಿಪೇಟೆ ಬಳಿಯ ಕಿದೆಬೆಟ್ಟುವಿನ ಪಿಯುಸಿ ವಿದ್ಯಾರ್ಥಿ ನಾಪತ್ತೆಯಾದ ಪ್ರಕರಣ ಸಂಬಂಧಿಸಿದಂತೆ ಸ್ಥಳೀಯ ಗ್ರಾಮಸ್ಥರು ಪೊಲೀಸ್ ಹೊರ ಠಾಣೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಮುಂದಿನ‌ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು, ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ, ಶನಿವಾರ ಫರಂಗಿಪೇಟೆ ಬಂದ್ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಅಡಿಷನಲ್ ಎಸ್ಪಿ ರಾಜೇಂದ್ರ ಅವರ ಜೊತೆ ಪ್ರತಿಭಟನಕಾರರು ಮಾತುಕತೆ ನಡೆಸಿದರು. ಬಳಿಕ ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿ ಮಾ.1 ರಂದು ಶನಿವಾರ ಬೆಳಗ್ಗಿನಿಂದ ಫರಂಗಿಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಗೊಳಿಸಿ ಪ್ರತಿಭಟನೆ ಮಾಡಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.
ಈ ಸಂದರ್ಭ ಪ್ರಮುಖರಾದ ಉಮೇಶ್ ಶೆಟ್ಟಿ ಬರ್ಕೆ, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್, ಚಂದ್ರಶೇಖರ ಗಾಂಭೀರ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಕಪಿತಾನಿಯೋ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕ ದಿಗಂತ್ ಫೆ.25ರಿಂದ ನಾಪತ್ತೆಯಾಗಿದ್ದಾನೆ. ಅಂದು
ಸಂಜೆ ಆಂಜನೇಯ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಳಿಕ ನಾಪತ್ತೆಯಾಗಿದ್ದ. ಹುಡುಕಾಟ ನಡೆಸಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಮನೆ ಸಮೀಪದ ರೈಲ್ವೇ ಹಳಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು