11:05 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

‘ಮಿಸ್ಟರ್ ಹುಬ್ಬಳ್ಳಿ’ ಮಿಲನ್ ಗೆ ಕರ್ನಾಟಕ ವಿವಿ ಡಾಕ್ಟರೇಟ್ಪದವಿ ಪ್ರದಾನ

18/07/2022, 23:24

ಧಾರವಾಡ(reporterkarnataka.com): ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ಹಾಗೂ ಸೂಕ್ಷ್ಮ ಜೀವಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಿಲನ ವಿ. ಕಾಂಬಳೆ ಅವರು ಮಂಡಿಸಿದ “ಐಡೆಂಟಿಫಿಕೇಶನ್ ಆ್ಯಂಡ್ ಕ್ಯಾರಕ್ಟರೈಜೇಶನ್ ಆಫ್ ಡೌನಿ ಮೆಲ್ಡಿವ್ ರೆಸ್ಪಾನ್ಸಿವ್ ಮೈಕ್ರೊಆರ್‌ಎನ್‌ಯೆಸ್ ಇನ್ ಇಂಡಿಯನ್ ವಿಟಿಸ್ ವಿನಿಫೆರಾ ಬೈ ಹಾಯ್- ಥ್ರೋಪುಟ್ ಸಿಕ್ವೆನ್ಸಿಂಗ್” ಎಂಬ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಲಭಿಸಿದೆ.

ಇವರಿಗೆ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಧೀಶ ಜೋಗಯ್ಯ ಅವರು ಮಾರ್ಗದರ್ಶನದಲ್ಲಿ ಮಹಾ ಪ್ರಬಂಧ ಮಂಡಿಸಿದ್ದರು.ಬಹುಮುಖ ಪ್ರತಿಭೆ: ಸಾಮಾನ್ಯ ಕುಟುಂಬವೊಂದರಿಂದ ಬಂದ ಮಿಲನ್ ಕಾಂಬಳೆ  ಎಲ್ಲ ಕಷ್ಟಗಳ ಮಧ್ಯಯೂ ತಮ್ಮೆಲ್ಲ ಆಸಕ್ತಿಗಳನ್ನು ಪೋಷಿಸುತ್ತಲೆ ಬಂದ ಒಬ್ಬ ಬಹುಮುಖ ಪ್ರತಿಭೆ. ತಮ್ಮ ಕಾಲೇಜು ದಿನಗಳಿಂದಲೂ ನೃತ್ಯ, ಹಾಗೂ ಬಾಡಿ ಬಿಲ್ಡಿಂಗ್ ಕುರಿತು ಅಪಾರ ಆಸಕ್ತಿಯನ್ನು ಹೊಂದಿದ್ದರು. 

ಇವರು  ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನೂ ಪಡೆದಿದ್ದಾರೆ. 

ಮಿಸ್ಟರ್ ಹುಬ್ಬಳ್ಳಿ: ಧಾರವಾಡ ಬಾಡಿ ಬಿಲ್ಡಂಗ್ ಅಸೋಯೇಶನ್ ವತಿಯಿಂದ ಹುಬ್ಬಳ್ಳಿಯಲ್ಲಿ ಜರುಗಿದ ೧೯ನೇ ಮಿಸ್ಟರ್ ಹುಬ್ಬಳ್ಳಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಸಿ ಮಿಸ್ಟರ್ ಹುಬ್ಬಳ್ಳಿ ಎನಿಸಿದ್ದರು. 

ಈ ಮೂಲಕ ಸಂಶೋಧನೆ ಮಾತ್ರವಲ್ಲದೇ ಪಠ್ಯೇತರ ಚಟುವಟಿಕೆಗಳಲ್ಲೂ ಮಿಲನ್ ಸಾಧನೆ ಮಾಡಿದ್ದಾರೆ. 

ತಮ್ಮ ಸಂಶೋಧನಾ ಅವಧಿಯಲ್ಲಿ ಮಿಲನ್ ಚೀನಾ ಸೇರಿದಂತೆ ಇತರಡೆ ಪ್ರವಾಸ ಕೈಗೊಂಡು ಸಂಶೋಧನಾ ಕಾರ್ಯ ಪೂರ್ಣಗೊಳಿಸಿದ್ದಾರೆ. ಒಟ್ಟಿನಲ್ಲಿ ಸಂಶೋಧಕರು ಎಂದ ತಕ್ಷಣ ಕೇವಲ ಪ್ರಯೋಗಾಲಯಕ್ಕೆ ಮಾತ್ರ ಸೀಮಿತವಲ್ಲ ದೇಹದಾರ್ಢ್ಯಕ್ಕೂ ಸೈ ಎಂದು ಮಿಲನ್ ತಮ್ಮ ಪ್ರತಿಭೆಯ ಮೂಲಕ ತೋರಿಸಿಕೊಟ್ಟಿದ್ದಾರೆ.

ಮಿಲನ್‌ನ ಈ ಸಾಧನೆಗೆ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ಮತ್ತು ಸ್ಮೂಕ್ಷ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಎ.ಬಿ. ವೇದಮೂರ್ತಿ ಮತ್ತು ಸಂಶೋಧನಾ ಮಾರ್ಗದರ್ಶಕರಾದ   ಡಾ. ಸುಧೀಶ ಜೋಗಯ್ಯ ಅವರು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು