5:48 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಇಂದಿನಿಂದ ಕರಾವಳಿಯಾದ್ಯಂತ ಮಿ.ಮದಿಮಯನ ಮದುವೆಯ ಗಮ್ಮತ್ತು

12/01/2024, 07:59

ಮಂಗಳೂರು(Reporterkarnataka.com)

ಮಂಗಳೂರು: ಎಮ್ ಎಮ್ ಎಮ್ ಗ್ರೂಫ್‌ ಬ್ಯಾನ‌ರ್ ನಡಿಯಲ್ಲಿ ನಿರ್ಮಾಣವಾದ “ಮಿಸ್ಟರ್ ಮದಿ ಮಯೆ” ತುಳು ಚಿತ್ರ ಜನವರಿ 12 ರಂದು ತೆರೆ ಕಾಣಲಿದೆ.

‘ಮಿಸ್ಟರ್ ಮದಿಮಯೆ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಸಿನಿಪೊಲಿಸ್, ಪಿವಿಆರ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರಿ ಯಲ್ಲಿ ಬಿಗ್ ಸಿನಿಮಾಸ್, ಉಡುಪಿ ಯಲ್ಲಿ ಕಲ್ಪನಾ, ಪುತ್ತೂರಿನಲ್ಲಿ ಭಾರತ್‌ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಸುಳ್ಯದಲ್ಲಿ ಸಂತೋಷ್ ಚಿತ್ರ ಮಂದಿರದಲ್ಲಿ ಸಿನಿಮಾ ತೆರೆ ಕಾಣಲಿದೆ.
ಈ ಬಗ್ಗೆ ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿರುವ ಸಾಯಿಕೃಷ್ಣ ಕುಡ್ಲ ಮಾಹಿತಿಯನ್ನು ನೀಡಿದರು.

ಸಿನಿಮಾದ ನಟ ಪ್ರಕಾಶ್ ಪಾಂಡೇಶ್ವರ ಮಾತನಾಡಿ, ‘ಹೊಸಬರ ತಂಡ ಒಂದೊಳ್ಳೆಯ ಪ್ರಯತ್ನ ಮಾಡಿದೆ, ಎಲ್ಲರೂ ಸಿನಿಮಾ ನೋಡುವ ಮೂಲಕ ಪ್ರೋತ್ಸಾಹಿಸಿದಲ್ಲಿ ನಿರ್ಮಾಪಕರು ಇನ್ನಷ್ಟು ಸಿನಿಮಾ ಮಾಡ ಬಹುದು’ ಎಂದರು.

ಸಿನಿಮಾಕ್ಕೆ ಒಂದೇ ಹಂತದಲ್ಲಿ ಸುಮಾರು 20 ದಿನಗಳ ಕಾಲ ಚಿತ್ರೀಕರಣ ನಡೆದಿದ್ದು, ಮುಖ್ಯವಾಗಿ ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಪ್ರತಿಭಾವಂತರ ತಂಡ ಸೇರಿಕೊಂಡು ಕೆಲಸ ಮಾಡಿದೆ. ಸಾಯಿಕೃಷ್ಣ ಕುಡ್ಲರಂತಹ ಪ್ರಬುದ್ಧ ಕಲಾವಿದರೊಂದಿಗೆ ಹೊಸ ಹುಡುಗರು ಇಲ್ಲಿ ತೆರೆಯನ್ನು ಹಂಚಿಕೊಂಡಿದ್ದಾರೆ.

ನವೀನ್ ಜಿ. ಪೂಜಾರಿ ಅವರ ನಿರ್ದೇಶನದ ಈ ಸಿನಿಮಾದ ನಾಯಕನಾಗಿ ಸಾಯಿಕೃಷ್ಣ ಕುಡ್ಲ ಅವರು ನಟಿಸುತ್ತಿದ್ದಾರೆ. ಉಳಿದಂತೆ ಪ್ರಮುಖ ಪಾತ್ರಗಳಲ್ಲಿ ಶ್ವೇತಾ ಸುವರ್ಣ, ರವಿಕಾಂತ್ ಪೂಜಾರಿ, ಜ್ಯೋತಿಷ್ ಶೆಟ್ಟಿ, ಸುನೀಲ್ ನೆಲ್ಲಿಗುಡ್ಡೆ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪಿಂಕಿ ರಾಣಿ, ರವಿ ರಾಮಕುಂಜ, ಪ್ರಕಾಶ್ ಪಾಂಡೇಶ್ವರ್, ಕಾಮಿಡಿ ಗ್ಯಾಂಗ್ ಖ್ಯಾತಿಯ ಮನೀಷ್ ಶೆಟ್ಟಿ ಉಪ್ಪಿರ, ಅಕ್ಷಯ್ ಸರಿಪಲ್ಲ, ಸಂದೀಪ್ ಶೆಟ್ಟಿ ರಾಯಿ, ಶರಣ್ ಕೈಕಂಬ, ಪ್ರವೀಣ್ ಮರ್ಕಮೆ, ಉತ್ಸವ್ ವಾಮಂಜೂರು, ಸವ್ಯರಾಜ್ ಕಲ್ಲಡ್ಕ, ಪ್ರಥ್ವಿನ್ ಪೊಳಲಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಮಿಥುನ್ ಕೆ.ಎಸ್. ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ರಾಜೇಶ್ ಫೆರಾವೋ ಅವರು ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ಕೆ.ಪಿ. ಮಿಲನ್ ಸಂಗೀತ ಹಾಗೂ ಪ್ರಶಾಂತ್ ಧರ್ಮಸ್ಥಳ ಅವರ ಛಾಯಾಗ್ರಹಣ ಇದೆ. ನವೀನ್ ಆರ್ಯನ್ ಮತ್ತು ವಿನೋದ್ ನೃತ್ಯ ಸಂಯೋಜಿಸಿದ್ದಾರೆ.

ಕೌರವ್ ವೆಂಕಟೇಶ್‌ರವರ ಸಾಹಸ, ಸುಕೇಶ್ ಶೆಟ್ಟಿ, ಜಿ.ಎಸ್ ಗುರುಪುರ ಅವರ ಸಾಹಿತ್ಯ, ಸುಜೀತ್ ನಾಯಕ್ ರವರ ಸಂಕಲನ ಇದೆ. ಚಿತ್ರವನ್ನು ಸಚಿನ್ ಎ. ಎಸ್. ಉಪ್ಪಿನಂಗಡಿ ಕರಾವಳಿ ಯಾದ್ಯಾಂತ ವಿತರಿಸುತ್ತಿದ್ದಾರೆ.

ವಸ್ತಾಲಂಕಾರ ನಿಖಿತಾ ಕೋಟ್ಯಾನ್, ನಿರ್ಮಾಣ ನಿರ್ವಾಹಕರಾಗಿ ಶ್ರೇಯಸ್ ಶೆಟ್ಟಿ, ಚಿತ್ರ ಮೇಲ್ವಿಚಾರಕರಾಗಿ ಹೆರಾಲ್ಡ್ ವಾಲ್ಟರ್, ಕಾರ್ಯಕಾರಿ ನಿರ್ಮಾ ಪಕರಾಗಿ ಸೌಮ್ಯ ಚೇತನ್ ಮತ್ತು ಸೌಜನ್ಯ ಶೆಟ್ಟಿ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಚಿತ್ರದ ಕ್ರಿಯೆಟಿವ್ ಹೆಡ್ ಬಚ್ಚನ್ ಚೇತುರವರು ಚಿತ್ರದ ಪ್ರತಿ ಹಂತದಲ್ಲೂ ಬೆನ್ನೆಲುಬಾಗಿ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು