9:49 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್​​ಗಾಗಿ ನಕಲಿ ದಾಖಲೆ ಸೃಷ್ಟಿ; ಒಂದೇ ಜಾಗದ ಹೆಸರಿನಲ್ಲಿ ಇಬ್ಬರಿಗೆ ಪರವಾನಗಿ!

10/07/2025, 10:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಜಮ್ಮ ಜಾಗದ ಹೆಸರಿನಲ್ಲಿ ಬಂದೂಕು ಪರವಾನಗಿ ಪಡೆಯುವ ಅಕ್ರಮ ಪ್ರಕರಣ ಬೆಳಕಿಗೆ ಬಂದಿದೆ. ಜಮ್ಮ ಜಾಗದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಂದೂಕು ಪರವಾನಗಿ ಪಡೆದಿರುವುದು ಪತ್ತೆಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಇಂತಹ ಹೆಚ್ಚಿನ ಪ್ರಕರಣಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬೇರೊಬ್ಬರ ಹೆಸರಿನಲ್ಲಿರುವ ಜಮ್ಮ ಜಾಗ ತಮ್ಮದೆಂದು ನಕಲಿ ದಾಖಲೆಗಳನ್ನು ನೀಡಿ ಬಂದೂಕು ಪರವಾನಗಿ (Gun License) ಪಡೆದಿರುವುದು ಪೊಲೀಸರ ತಪಾಸಣೆ ವೇಳೆ ಬಯಲಾಗಿದೆ. ಇತ್ತೀಚೆಗೆ ಭಾಗಮಂಡಲ ಪೊಲೀಸರು ಬಂದೂಕು ಪರವಾನಗಿ ನವೀಕರಣ ಪರಿಶೀಲಿಸುವ ಸಂದರ್ಭದಲ್ಲಿ ಈ ಅಕ್ರಮ ಬೆಳಕಿಗೆ ಬಂದಿದೆ.

ಭಾಗಮಂಡಲದ ಬಾಲಕೃಷ್ಣ ಎಂಬುವರು ಜಮ್ಮ ಜಾಗದ ಆಧಾರದ ಮೇಲೆ ಬಂದೂಕು ಪರವಾನಗಿ ಹೊಂದಿದ್ದಾರೆ. ಆದರೆ, ಇವರಿಗೆ ಅರಿವಿಲ್ಲದೆ ಮತ್ತೊಬ್ಬ ಬಾಲಕೃಷ್ಣ ಎಂಬುವರು ಆ ಜಮ್ಮ ಜಾಗ ತಮ್ಮದೆಂದು ನಕಲಿ ದಾಖಲೆಗಳನ್ನು ನೀಡಿ ಬಂದೂಕು ಖರೀದಿಸಿ, ಪರವಾನಗಿ ಪಡೆದಿದ್ದಾರೆ. ಒಂದೇ ಜಮ್ಮ ಜಾಗದ ಹೆಸರಲ್ಲಿ ಇಬ್ಬರು ಬಂದೂಕು ಪರವಾನಿಗಿ ಪಡೆದಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಎಷ್ಟು ಜನ ಇದೇ ರೀತಿ ಅಕ್ರಮವಾಗಿ ಬಂದೂಕು ಪರವಾನಿಗೆ ಪಡೆದಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇನ್ನು, ಜಿಲ್ಲಾಡಳಿತ ಪರಿಶಿಲಿಸದೆ ಹೇಗೆ ಬಂದೂಕು ಪರವಾನಿಗಿ ನೀಡಿದೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು