7:27 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಮಸ್ಕಿ ಪ್ರಗತಿ ಪರಿಶೀಲಿನಾ ಸಭೆ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ಶಾಸಕ ಬಸನಗೌಡ ತೂರುವಿಹಾಳ

15/05/2025, 00:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕು ವಾಲ್ಮೀಕಿ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಸ್ಕಿ ಶಾಸಕ ಬಸನಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೃಷಿ ಸಹಾಯ ನಿರ್ದೇಶಕರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು. ಕೃಷಿ ಹೊಂಡ ಸೌಲಭ್ಯ ನೀಡುವ ಯೋಜನೆಗೆ 32 ಫಲಾನುಭವಿಗಳನ್ನು ತಾನೇ ಆಯ್ಕೆ ಮಾಡಿದ್ದಕ್ಕೆ ಶಾಸಕರು ಕೆಂಡ ಮಂಡಲವಾದರು.ಎಲ್ಲ ನೀನು ಆಯ್ಕೆ ಮಾಡುವುದಾದರೆ, ನಮ್ಮದೇನು ಕೆಲಸ? ಎಷ್ಟು ಫ್ರಾಡ್ ಮಾಡಿದ್ದೀರಿ? 5 ಕೋಟಿ ಕಾಮಗಾರಿ ಮಾಹಿತಿ ನನಗೆ ನೀಡಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗೆ ಏ ಕತ್ತಿ ಕಾಯೋನು ಸರಿಯಾದ ಮಾಹಿತಿ ನನಗೆ ಕೊಡಿ. ಪ್ಯಾಂಟು ಶರ್ಟ್ ಹಾಕಿಕೊಂಡು ನೀಟಾಗಿ ಸರ್ಕಾರದ ಗೌರವ ತೆಗೆದುಕೊಂಡು ಆರಾಮ್ ಇದ್ದುಬಿಡು ಫಲಾನುಭವಿಗಳು ಹಾಳಾಗಿ ಹೋಗಲಿ. ಕಾರ್ಯನಿರ್ವಾಹಕ ಅಧಿಕಾರಿಗಳು ನಮಗೂ ಮಾಹಿತಿ ನೀಡದೆ ನಿನಗೆ ಆಯ್ಕೆ ಮಾಡಲು ಪವರ್ ಕೊಟ್ಟವರು ಯಾರು ಎಂದು ಅಧಿಕಾರಿಗಳ ಚಳಿ ಬಿಡಿಸಿದರು.
ಸರಿಯಾದ ರೀತಿಯಲ್ಲಿ ಕೆಲಸ ಮಾಡಿ. ಕುಡಿಯುವ ನೀರಿನ ಯೋಜನೆಯಲ್ಲಿ ಬಹಳ ಭ್ರಷ್ಟಾಚಾರ ಹೇಳಿ ಬರುತ್ತದೆ. ಕೆಲಸ ಕಾರ್ಯ ಆಗದೆ ಯಾವುದೇ ಬಿಲ್ ಮಾಡಬಾರದು ಎಂದು ಶಾಸಕರು ಎಚ್ಚರಿಸಿದರು.


ಮುಂದಿನ ಸಭೆಯಲ್ಲಿ ಮಾಹಿತಿ ನೀಡದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು..
ಎಲ್ಲಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರೆ ಕೆಲವೊಂದು ಅಧಿಕಾರಿಗಳು ಗೈರಾಗಿದ್ದರು. ಕಾರ್ಯನಿರ್ವಾಹಕ ಅಧಿಕಾರಿಗಳು ನಮಗೆ ಹೇಳಲಾರದೆ ಅಸಿಸ್ಟೆಂಟ್ ಅಧಿಕಾರಿಗಳನ್ನು ಕಳಿಸಿದರೆ ಅವರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು