6:21 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಮಸ್ಕಿ ಪ್ರಗತಿ ಪರಿಶೀಲಿನಾ ಸಭೆ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ಶಾಸಕ ಬಸನಗೌಡ ತೂರುವಿಹಾಳ

15/05/2025, 00:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕು ವಾಲ್ಮೀಕಿ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಸ್ಕಿ ಶಾಸಕ ಬಸನಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೃಷಿ ಸಹಾಯ ನಿರ್ದೇಶಕರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು. ಕೃಷಿ ಹೊಂಡ ಸೌಲಭ್ಯ ನೀಡುವ ಯೋಜನೆಗೆ 32 ಫಲಾನುಭವಿಗಳನ್ನು ತಾನೇ ಆಯ್ಕೆ ಮಾಡಿದ್ದಕ್ಕೆ ಶಾಸಕರು ಕೆಂಡ ಮಂಡಲವಾದರು.ಎಲ್ಲ ನೀನು ಆಯ್ಕೆ ಮಾಡುವುದಾದರೆ, ನಮ್ಮದೇನು ಕೆಲಸ? ಎಷ್ಟು ಫ್ರಾಡ್ ಮಾಡಿದ್ದೀರಿ? 5 ಕೋಟಿ ಕಾಮಗಾರಿ ಮಾಹಿತಿ ನನಗೆ ನೀಡಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗೆ ಏ ಕತ್ತಿ ಕಾಯೋನು ಸರಿಯಾದ ಮಾಹಿತಿ ನನಗೆ ಕೊಡಿ. ಪ್ಯಾಂಟು ಶರ್ಟ್ ಹಾಕಿಕೊಂಡು ನೀಟಾಗಿ ಸರ್ಕಾರದ ಗೌರವ ತೆಗೆದುಕೊಂಡು ಆರಾಮ್ ಇದ್ದುಬಿಡು ಫಲಾನುಭವಿಗಳು ಹಾಳಾಗಿ ಹೋಗಲಿ. ಕಾರ್ಯನಿರ್ವಾಹಕ ಅಧಿಕಾರಿಗಳು ನಮಗೂ ಮಾಹಿತಿ ನೀಡದೆ ನಿನಗೆ ಆಯ್ಕೆ ಮಾಡಲು ಪವರ್ ಕೊಟ್ಟವರು ಯಾರು ಎಂದು ಅಧಿಕಾರಿಗಳ ಚಳಿ ಬಿಡಿಸಿದರು.
ಸರಿಯಾದ ರೀತಿಯಲ್ಲಿ ಕೆಲಸ ಮಾಡಿ. ಕುಡಿಯುವ ನೀರಿನ ಯೋಜನೆಯಲ್ಲಿ ಬಹಳ ಭ್ರಷ್ಟಾಚಾರ ಹೇಳಿ ಬರುತ್ತದೆ. ಕೆಲಸ ಕಾರ್ಯ ಆಗದೆ ಯಾವುದೇ ಬಿಲ್ ಮಾಡಬಾರದು ಎಂದು ಶಾಸಕರು ಎಚ್ಚರಿಸಿದರು.


ಮುಂದಿನ ಸಭೆಯಲ್ಲಿ ಮಾಹಿತಿ ನೀಡದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು..
ಎಲ್ಲಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರೆ ಕೆಲವೊಂದು ಅಧಿಕಾರಿಗಳು ಗೈರಾಗಿದ್ದರು. ಕಾರ್ಯನಿರ್ವಾಹಕ ಅಧಿಕಾರಿಗಳು ನಮಗೆ ಹೇಳಲಾರದೆ ಅಸಿಸ್ಟೆಂಟ್ ಅಧಿಕಾರಿಗಳನ್ನು ಕಳಿಸಿದರೆ ಅವರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು