4:44 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಮಂಗಳೂರು: ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು; ಒಬ್ಬನ ಬಂಧನ

19/08/2023, 22:27

ಮಂಗಳೂರು(reporterkarnataka.com): ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗ್ಯಾಸ್‌ ಸಿಲಿಂಡರ್‌ ದಾಸ್ತಾನು ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಮಂಗಳೂರು ಗ್ಯಾಸ್‌ ಲೈಟ್ ಅಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಗ್ಯಾಸ್‌ ಸಿಲಿಂಡರ್‌ ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ತಿಳಿದು ಬಂದ ಮಾಹಿತಿಯಂತೆ ದಾಳಿ ಮಾಡಲಾಯಿತು.


ಈ ಸಂದರ್ಭದಲ್ಲಿ ಅರ್ಧ ಗ್ಯಾಸ್ ತುಂಬಿದ 3 ಗೃಹ ಬಳಕೆಯ ಇಂಡೇನ್ ಮತ್ತು ಹೆಚ್.ಪಿ ಗ್ಯಾಸ್ ಸಿಲಿಂಡರ್ ಗಳು ಸೇರಿದಂತೆ ಒಟ್ಟು 26 ವಿವಿಧ ಆಳತೆಯ ಗ್ಯಾಸ್ ಸಿಲಿಂಡರ್ ಗಳನ್ನು ಪತ್ತೆ ಹಚ್ಚಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಳಕೆಯ ಶೇಖ್ ಆಶಪ್‌ ಉದ್ದೀನ್ (59) ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು