1:23 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಂಗಳೂರು: ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು; ಒಬ್ಬನ ಬಂಧನ

19/08/2023, 22:27

ಮಂಗಳೂರು(reporterkarnataka.com): ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗ್ಯಾಸ್‌ ಸಿಲಿಂಡರ್‌ ದಾಸ್ತಾನು ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಮಂಗಳೂರು ಗ್ಯಾಸ್‌ ಲೈಟ್ ಅಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಗ್ಯಾಸ್‌ ಸಿಲಿಂಡರ್‌ ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ತಿಳಿದು ಬಂದ ಮಾಹಿತಿಯಂತೆ ದಾಳಿ ಮಾಡಲಾಯಿತು.


ಈ ಸಂದರ್ಭದಲ್ಲಿ ಅರ್ಧ ಗ್ಯಾಸ್ ತುಂಬಿದ 3 ಗೃಹ ಬಳಕೆಯ ಇಂಡೇನ್ ಮತ್ತು ಹೆಚ್.ಪಿ ಗ್ಯಾಸ್ ಸಿಲಿಂಡರ್ ಗಳು ಸೇರಿದಂತೆ ಒಟ್ಟು 26 ವಿವಿಧ ಆಳತೆಯ ಗ್ಯಾಸ್ ಸಿಲಿಂಡರ್ ಗಳನ್ನು ಪತ್ತೆ ಹಚ್ಚಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಳಕೆಯ ಶೇಖ್ ಆಶಪ್‌ ಉದ್ದೀನ್ (59) ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು