9:27 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸಕ್ರೀಯ ರಾಜಕಾರಣಕ್ಕೆ ನ್ಯಾಯವಾದಿ ಪದ್ಮರಾಜ್ ಎಂಟ್ರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

26/04/2023, 10:29

ಮಂಗಳೂರು(reporterkarnataka.com):ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಎಂದೇ ಬಿಂಬಿತವಾಗಿದ್ದ ಯುವ ನ್ಯಾಯವಾದಿ, ಸಾಮಾಜಿಕ ದುರೀಣ ಪದ್ಮರಾಜ್ ಆರ್. ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಪದ್ಮರಾಜ್ ಅವರು ನೇರವಾಗಿ ಕಾಂಗ್ರೆಸ್ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಪದ್ಮರಾಜ್ ಅವರಿಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಅವರ ಅಭಿಮಾನಿಗಳು, ಹಿತೈಷಿಗಳು ಒತ್ತಾಯಿಸಿದ್ದರು. ಹಾಗಂತ ಟಿಕೆಟ್ ಗಾಗಿ ಪದ್ಮರಾಜ್ ಅವರು ಕಾಂಗ್ರೆಸ್ ಗೆ ಅರ್ಜಿ ಸಲ್ಲಿಸಿದವರಲ್ಲ. ಇದನ್ನೇ ಕೆಲವು ಕಾಂಗ್ರೆಸಿಗರು ಪ್ರಶ್ನಿಸಿದ್ದರು. ಟಿಕೆಟ್ ಕುರಿತಂತೆ ಪದ್ಮರಾಜ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿತ್ತು. ಹೊಟೇಲ್ ಮೌರ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಮುಂತಾದವರು ಪದ್ಮರಾಜ್ ಜತೆ ಮಾತುಕತೆ ನಡೆಸಿದ್ದರು. ಮಂಗಳೂರು ದಕ್ಷಿಣ ಹೊರತುಪಡಿಸಿ ಇತರ 2-3 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು. ಆದರೆ ಪದ್ಮರಾಜ್ ಅವರ ಕಾರ್ಯಕ್ಷೇತ್ರ ಮಂಗಳೂರು ದಕ್ಷಿಣ ಆಗಿರುವುದರಿಂದ ಅವರು ಈ ಎಲ್ಲ ಆಫರ್ ಗಳನ್ನು ವಿನಯದಿಂದ ನಿರಾಕರಿಸಿದ್ದರು. ಇದೀಗ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ದೊಡ್ಡ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು