9:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೊಬೈಲ್ ಚೋರನ ಬೆನ್ನಟ್ಟಿ ಹಿಡಿದ ಎಎಸ್ ಐ ವರುಣ್ ಆಳ್ವ: ಎಸ್ ಸಿಐ ಮಂಗಳೂರು ಲೀಜನ್ ನಿಂದ ವಿಶೇಷ ಗೌರವ

23/01/2022, 18:34

ಮಂಗಳೂರು(reporterkarnatakanews):ಇತ್ತೀಚೆಗೆ ಮಂಗಳೂರು ನಗರದಲ್ಲಿ ಮೊಬೈಲ್ ಕಳ್ಳತನ ನಡೆಸಿದ ಕಳ್ಳನನ್ನು ಸುಮಾರು ಒಂದು ಕಿ.ಮೀ. ವರೆಗೆ ಬೆನ್ನಟ್ಟಿ ಹಿಡಿದ ಎ.ಎಸ್.ಐ. ವರುಣ್ ಆಳ್ವರಿಗೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವು ಕೊಟ್ಟಾರ ಚೌಕಿ ಜಂಕ್ಷನ್ ನಲ್ಲಿರುವ ಉದ್ಭವ ಸ್ಕ್ವೇರ್ ಕಟ್ಟಡದಲ್ಲಿ ಜರುಗಿತು.


ಎ.ಎಸ್.ಐ. ವರುಣ್ ಆಳ್ವ ಅವರನ್ನು ಎಸ್.ಸಿ.ಐ. ಮಂಗಳೂರು ಘಟಕದ ಪದಾಧಿಕಾರಿಗಳು ಶಾಲು ಹೊದಿಸಿ, ಪೇಟ ತೊಡಿಸಿ, ಸನ್ಮಾನ ಪತ್ರ ಹಾಗೂ ಫಲಪುಷ್ಪ ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಘಟಕದ ಅಧ್ಯಕ್ಷ ರಾದ ಹರಿಪ್ರಸಾದ್ ರೈ, ಕಾರಮೊಗರುಗುತ್ತು ಅವರು ವರುಣ್ ಆಳ್ವರನ್ನು ಶ್ಲಾಘಿಸಿದರಲ್ಲದೇ ಇವರು ಇನ್ನು ಮುಂದಕ್ಕೂ ನಮ್ಮ ನಾಡಿಗೆ ಹೆಮ್ಮೆ ತರಲಿ ಎಂದು ಆಶಿಸಿದರು. ಅಷ್ಟೇ ಅಲ್ಲದೇ ನಮ್ಮ ಸೀನಿಯರ್ ಚೇಂಬರ್ ಮಂಗಳೂರು ಲೀಜನ್ ನ ಸದಸ್ಯರ ಒಗ್ಗೂಡುವಿಕೆಯಿಂದ ಇಂತಹ ಕಾರ್ಯಕ್ರಮವನ್ನು ನಡೆಸಲು ಸಹಕಾರಿಯಾಯಿತು ಎಂದು ತಿಳಿಸಿದರು. ಸನ್ಮಾನ ಪತ್ರವನ್ನು ಎಸ್.ಸಿ.ಐ. ನ ಸದಸ್ಯರಾದ ಸುಬ್ರಹ್ಮಣ್ಯ ಅವರು ವಾಚಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ವರುಣ್ ಆಳ್ವ ಅವರು ನಾನು ಮಾಡಿದ ಸಣ್ಣ ಕೆಲಸವನ್ನು ಗುರುತಿಸಿ ಸೀನಿಯರ್ ಚೇಂಬರ್ ನವರು ನನಗೆ ಸನ್ಮಾನವನ್ನು ಮಾಡಿದ್ದಕ್ಕೆ ನಾನು ಅಭಾರಿಯಾಗಿದ್ದೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಎಸ್.ಸಿ.ಐ. ನ ಸದಸ್ಯೆ ಲತಾ ಕರ್ಕೇರ ಅವರ ಮಗಳಾದ ಸಂಜನಾ ಅವರ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸಿ ಆಚರಿಸಲಾಯಿತು.

ಇಂದಿನ ಸನ್ಮಾನ ಕಾರ್ಯ ಕ್ರಮಕ್ಕೆ ಸ್ಥಳಾವಕಾಶವನ್ನು ಎಡಲ್ ವೈಸ್ ಟೋಕಿಯೋ ಲೈಫ್ ಇನ್ಸೂರೆನ್ಸ್ ನ ಬ್ರಾಂಚ್ ಟೀಮ್ ಲೀಡರ್ ಪ್ರತಿಭಾ ಶೆಟ್ಟಿಯವರು ನೀಡಿದ್ದು ಅವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಸಮಾರಂಭದಲ್ಲಿ ಎಸ್.ಸಿ.ಐ. ಮಂಗಳೂರು ಘಟಕದ ಕಾರ್ಯದರ್ಶಿ ಶಾಲಿನಿ ಸುವರ್ಣ, ಸದಸ್ಯರಾದ ಫ್ಲೇವಿ ಗ್ಲಾಡಿಸ್ ಡಿಮೆಲ್ಲೊ, ಲತಾ ಕರ್ಕೇರ, ಉಷಾ ಶೆಟ್ಟಿ, ಸದಾನಂದ ಶೆಟ್ಟಿ, ಲತಾ ಕಲ್ಲಡ್ಕ, ಎಡಲ್ ವೈಸ್ ನ ಜಯಲಕ್ಷ್ಮಿ ಶೆಟ್ಟಿ, ನಾಗರಾಜ್, ಸೋನಿಯಾ,ಮಾಲತಿ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹರಿಪ್ರಸಾದ್ ರೈ ನಿರೂಪಿಸಿ, ಶಾಲಿನಿ ಸುವರ್ಣ ವಂದಿಸಿದರು.ಕೊನೆಯಲ್ಲಿ ಎ.ಎಸ್.ಐ. ವರುಣ್ ಆಳ್ವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು