10:39 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮೊಬೈಲ್ ಫೋನ್ ತಂದ ಆಪತ್ತು: ವಿಡಿಯೋ ಕಾಲ್ ಮಾಡಿ ಪತ್ನಿಯೊಂದಿಗೆ ಮಾತನಾಡುತ್ತಿದ್ದ ಪತಿರಾಯ ದಾರುಣ ಸಾವು

05/03/2024, 15:33

*ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ರೈಲ್ವೆ ನಿಲ್ದಾಣದ ಬಳಿ ನಡೆದ ಅವಘಡ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಬಿಹಾರ ಮೂಲದಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕೌಲಂದೆ ಗ್ರಾಮದ ಬಳಿ ಕಾರ್ಪೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಇಂದು ಬೆಳಗ್ಗೆ ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡಿಕೊಂಡು ಮಾತನಾಡುತ್ತಿದ್ದಾಗ ರೈಲು ಬರುವುದನ್ನು ಗಮನಿಸದೇ ಮೈ ಮರೆತು ಚಲಿಸುತ್ತಿದ್ದ ರೈಲಿಗೆ ತಾಕಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಮನು ಕುಮಾರ್ 27 ವರ್ಷದ ಮೃತ ವ್ಯಕ್ತಿಯಾಗಿ ಎಂದು ತಿಳಿದು ಬಂದಿದೆ.


ಮನು ಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಕೆಲವು ವರ್ಷಗಳಿಂದ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು.
ಬೆಳಂ ಬೆಳಗ್ಗೆ ಬಯಲು ಶೌಚಾಲಯಕ್ಕೆ ತೆರಳಿದ ಸಂದರ್ಭದಲ್ಲಿ ಬಿಹಾರದಲ್ಲಿದ್ದ ತನ್ನ ಪತ್ನಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಮಾತನಾಡಿಕೊಂಡು ರೈಲ್ವೆ ಟ್ರ್ಯಾಕ್ ದಾಟುತ್ತಿರುವ ಸಂದರ್ಭದಲ್ಲಿ ಚಾಮರಾಜನಗರ ಕಡೆಯಿಂದ ಮೈಸೂರುಗೆ ತೆರಳುತ್ತಿದ್ದ ರೈಲು ಆಕಸ್ಮಿಕವಾಗಿ ತಾಕಿದ ಪರಿಣಾಮ ಬಿಹಾರ ಮೂಲದ ಕಾರ್ಮಿಕ ಸ್ಥಳದಲ್ಲೆ ಸಾವನಪ್ಪಿದ್ದಾರೆ.
ರೈಲು ಬರುತ್ತಿರುವುದನ್ನು ಕಾಣದೆ ಮೈ ಮರೆತ ಪರಿಣಾಮ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯ ಆರ್‌ಪಿಎಫ್ ಜಗನ್ನಾಥ್, ಪೊಲೀಸ್ ಸಿಬ್ಬಂದಿಗಳಾದ ಶ್ರೀನಿವಾಸ್, ಕುಮಾರ್, ಭೇಟಿ ನೀಡಿ, ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು