3:44 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮೊಬೈಲ್ ಸಂಭಾಷಣೆ ವೇಳೆ ಜಗಳ: ಮದುವೆ  ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಆತ್ಮಹತ್ಯೆ

13/08/2022, 18:58

ರಾಯಚೂರು(reporterkarnataka.com): ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಜೋಡಿಯೊಂದು ಕ್ಷುಲ್ಲಕ ಕಾರಣಕ್ಕೆ‌ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಯಚೂರಿನಲ್ಲಿ‌ ನಡೆದಿದೆ‌.

ಆತ್ಮಹತ್ಯೆಗೆ ಶರಣಾದವರನ್ನು ಸಿಂಗನೋಡಿ‌ ಗ್ರಾಮದ ಸರಸ್ವತಿ(21) ಹಾಗೂ ಮಂಡಲಗೇರಾ ಗ್ರಾಮದ ವಿನೋದ(24)ಎಂದು ಗುರುತಿಸಲಾಗಿದೆ.

ವಿನೋದ್​​​ ಮತ್ತು ಸರಸ್ವತಿ ಅವರ ಮನೆಯವರೆಲ್ಲ ಸೇರಿ ವಿವಾಹ
ನಿಶ್ಚಿತಾರ್ಥ ಮಾಡಿದ್ದರು. ಬಳಿಕ ಮದುವೆಗೆ ಸಿದ್ಧವಾಗಿದ್ದ ಜೋಡಿ ಮೊಬೈಲ್​ನಲ್ಲಿ ದಿನಾ ಪರಸ್ಪರ ಮಾತನಾಡುತ್ತಿದ್ದರು. ಹಾಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಜಗಳವಾಡಿಕೊಂಡಿದ್ದರು. ಇದರಿಂದ ಮನನೊಂದು ಯುವತಿ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಷಯ ತಿಳಿದ ಯುವಕ ವಿನೋದ್ ಕೂಡ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು