10:01 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮೊಬೈಲ್ ನಲ್ಲಿ ಮಾತನಾಡುತ್ತಾ ಮಲಗಿದವರ ಮೇಲೆ ಟಪರ್ ಚಲಾಯಿಸಿದ ಚಾಲಕ: ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ

24/11/2023, 20:54

ಹೆಬ್ರಿ(reporterkarnataka.com): ಸೋಮೇಶ್ವರದ ಪೆಟ್ರೋಲ್‌ ಬಂಕಿನಲ್ಲಿ ಮಲಗಿದ್ದ ಇಬ್ಬರ ಮೇಲೆ ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು
ಸಾಗರ ತಾಲೂಕಿನ ಶಿವರಾಜ್(38) ಎಂದು ಗುರುತಿಸಲಾಗಿದೆ. ಮಹೇಂದ್ರ ಎಂಬವರು ಈ ದುರ್ಘಟನೆಯಿಂದ ಗಂಭೀರ ಗಾಯಗೊಂಡಿದ್ದಾರೆ.
ಸಾಗರ ಕಡೆಯಿಂದ ಬಾಳೆಕಾಯಿ ತುಂಬಿಸಿಕೊಂಡು ಬಂದಿದ್ದ ಶಿವರಾಜ್ ಹಾಗೂ ಮಹೇಂದ್ರ ರಾತ್ರಿ ವೇಳೆ ಸೋಮೇಶ್ವರದ ಪೆಟ್ರೋಲ್ ಬಂಕ್ ನಲ್ಲಿ ಟಾಟಾ ಏಸ್ ವಾಹನವನ್ನು ನಿಲ್ಲಿಸಿ ವಾಹನದ ಮುಂದೆ ಮಲಗಿದ್ದರು. ಮುಂಜಾನೆ 6 ಗಂಟೆ ಸುಮಾರಿಗೆ ಟಿಪ್ಪರ್ ಚಾಲಕನೋರ್ವ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಲಗಿದ್ದವರ ಮೇಲೆಯೇ ಚಲಾಯಿಸಿಕೊಂಡು ಹೋದ ಪರಿಣಾಮ ಶಿವರಾಜ್ ಸ್ಥಳದಲ್ಲೇ ಮೃತಪಟ್ಟರೆ, ಮಹೇಂದ್ರ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಟಿಪ್ಪರ್ ಚಾಲಕ ಮೊಬೈಲ್‌ ನಲ್ಲಿ ಮಾತನಾಡಿಕೊಂಡು ಟಿಪ್ಪರ್ ಚಲಾಯಿಸಿರುವುದೇ ದುರಂತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದ ಭೀಕರ ದೃಶ್ಯ ಪೆಟ್ರೋಲ್ ಬಂಕಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸರು ಭೇಟಿ ನೀಡಿದ್ದು,ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು