9:07 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ದುರ್ಗಮ ಪ್ರದೇಶಗಳಿಗೆ ಸಂಚಾರಿ ಅರೋಗ್ಯ ಘಟಕ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

09/01/2026, 21:43

ಮಂಗಳೂರು(reporterkarnataka.com): ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಅರೋಗ್ಯ ಘಟಕಗಳಿಗೆ ಅರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ 5 ಹಾಗೂ ಉಡುಪಿ ಜಿಲ್ಲೆಯ 4 ಸಂಚಾರಿ ಅರೋಗ್ಯ ಘಟಕ ವಾಹನಗಳಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯoತ ಒಟ್ಟು 81 ಸಂಚಾರಿ ಅರೋಗ್ಯ ಘಟಕಗಳಿಗೆ ಚಾಲನೆ ನೀಡಲಾಗಿದೆ. ಇದು ಸರಕಾರದ ಜನಪರ ಯೋಜನೆಗಳ ಭಾಗವಾಗಿದೆ. ಸಂಪರ್ಕ ರಹಿತ ಮತ್ತು ಗುಡ್ಡ ಗಾಡು ಪ್ರದೇಶಗಳಿಗೆ ಈ ಅರೋಗ್ಯ ಸೇತು ವಾಹನಗಳು ತೆರಳಿ ಅರೋಗ್ಯ ಸೇವೆ ನೀಡಲಿದೆ ಎಂದು ಹೇಳಿದರು.
ಈ ವಾಹನದಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್ ಮತ್ತು ಒಬ್ಬ ಲ್ಯಾಬ್ ಟೆಚ್ನಿಷಿಯನ್ ಇರಲಿದ್ದಾರೆ. ಅಗತ್ಯವಿರುವ ಔಷಧಿಗಳು, ಸಲಕರಣೆಗಳು, ತುರ್ತು ಅರೋಗ್ಯ ಪರಿಸ್ಥಿತಿಯ ನಿರ್ವಹಣೆಗೆ ಜೀವನಾವಶ್ಯಕ ಔಷಧಿಗಳೊಂದಿಗೆ ಈ ಅರೋಗ್ಯ ಸೇತು ವಾಹನವನ್ನು ಸಜ್ಜುಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸ್ಥಳೀಯರಿಗೆ ಮುಂಗಡವಾಗಿ ತಿಳಿಸಿ ಸಂಚಾರಿ ಅರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಜಿಲ್ಲಾ ಪಂಚಾಯತ್ ಸಿಇಓ ವಿನಾಯಕ್ ನರ್ವಡೆ, ಜಿಲ್ಲಾ ಅರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ ಶಿವಪ್ರಕಾಶ್, ಲೇಡಿಘೋಷನ್ ಅಧೀಕ್ಷಕ ಡಾ ದುರ್ಗಾ ಪ್ರಸಾದ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು