3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಮೊದಲು ತೀರ್ಪು, ನಂತರ ವಿಚಾರಣೆ: ಇದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಟೈಲ್!

18/06/2021, 08:01

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯ ಬಿಕ್ಕಟ್ಟು ಶಮನ ಮಾಡಲೆಂದು ಆಗಮಿಸಿದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಕೇಳುವ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಉತ್ತಮ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನ ಏರ್ ಫೋರ್ಟ್ ನಲ್ಲೇ ಹೇಳಿಕೆ ನೀಡಿದ್ದರು. ಶಾಸಕರ ಅಭಿಪ್ರಾಯ ಆಲಿಸುವ ಮುನ್ನವೇ ಸಿಂಗ್ ಅವರು ಸರ್ಟಿಫಿಕೇಟ್ ನೀಡಿಯಾಗಿದೆ. ಇದೊಂದು ವಿಚಾರಣೆ ನಡೆಸುವ ಮುನ್ನವೇ ತೀರ್ಪು ಕೊಟ್ಟಂತಾಗಿದೆ.

ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಅಸಮಾಧಾನದ ಕುರಿತು ಅರಿತುಕೊಳ್ಳಲು ಬಂದ ಅರುಣ್ ಸಿಂಗ್ ಅವರು ಮೊದಲಿಗೆ ಭಿನ್ಬಮತೀಯ ಶಾಸಕರ ಅಭಿಪ್ರಾಯವನ್ನು ಕ್ರೋಢೀಕರಿಸಬೇಕಿತ್ತು. ನಂತರ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಪಕ್ಷದ ಶಾಸಕರುಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಸಬೇಕಿತ್ತು. ಇದೆಲ್ಲ ಮುಗಿದ ಬಳಿಕ ಅವರು ತನ್ನ ಅಭಿಪ್ರಾಯ ಮಂಡಿಸಬೇಕಿತ್ತು. ಅದೆಲ್ಲ ಬಿಟ್ಟು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಕಾಲಿಡುತ್ತಿದ್ದಂತೆ ‘ಯಡಿಯೂರಪ್ಪ ಸೇಫ್’ ಅಂತ ಘೋಷಿಸಿಯೇ ಬಿಟ್ಟರು. ಯಡಿಯೂರಪ್ಪ ಸರಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಕೊರೊನಾವನ್ನು ಚೆನ್ನಾಗಿ ನಿರ್ವಹಿಸುತ್ತಿದೆ ಎಂದು 

ಹೇಳುವುದಾದರೆ ಅವರು ರಾಜ್ಯಕ್ಕೆ ಬರುವ ಅವಶ್ಯಕತೆ ಏನಿತ್ತು?  ದಿಲ್ಲಿಯಲ್ಲೇ ಕುಳಿತು ಈ ಹೇಳಿಕೆಯನ್ನು ನೀಡಬಹುದಿತ್ತಲ್ಲ? ಅದಲ್ಲದೆ ಪ್ರಮುಖ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭೇಟಿಗೆ ಸಮಯ ನೀಡಿದ್ದರೂ ಕೊನೆಯ ಕ್ಷಣದಲ್ಲಿ ಅದನ್ನು ರದ್ದುಪಡಿಸಿದ್ದಾರೆ. ಯತ್ನಾಳ್ ಹೇಳಿಗೆ ನಾವು ಹೆಚ್ಚಿನ ಮಹತ್ವ ನೀಡುವುದಿಲ್ಲ, ನೀವು ಕೂಡ ಬಿಡಬೇಡಿ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದ್ದಾರೆ. ಒಂದು ರೀತಿಯಲ್ಲಿ ಅರುಣ್ ಸಿಂಗ್ ಅವರಿಗೆ ಕರ್ನಾಟಕಕ್ಕೆ ಬಂದ ಉದ್ದೇಶವಾದರೂ ಏನು ಎನ್ನುವುದು ಅವರಿಗೇ ಸ್ಪಷ್ಟವಾಗಿ ಇದ್ದ ಹಾಗೆ ಕಾಣಿಸುತ್ತಿಲ್ಲ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು