12:38 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮೊದಲು ತೀರ್ಪು, ನಂತರ ವಿಚಾರಣೆ: ಇದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಟೈಲ್!

18/06/2021, 08:01

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯ ಬಿಕ್ಕಟ್ಟು ಶಮನ ಮಾಡಲೆಂದು ಆಗಮಿಸಿದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಕೇಳುವ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಉತ್ತಮ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನ ಏರ್ ಫೋರ್ಟ್ ನಲ್ಲೇ ಹೇಳಿಕೆ ನೀಡಿದ್ದರು. ಶಾಸಕರ ಅಭಿಪ್ರಾಯ ಆಲಿಸುವ ಮುನ್ನವೇ ಸಿಂಗ್ ಅವರು ಸರ್ಟಿಫಿಕೇಟ್ ನೀಡಿಯಾಗಿದೆ. ಇದೊಂದು ವಿಚಾರಣೆ ನಡೆಸುವ ಮುನ್ನವೇ ತೀರ್ಪು ಕೊಟ್ಟಂತಾಗಿದೆ.

ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಅಸಮಾಧಾನದ ಕುರಿತು ಅರಿತುಕೊಳ್ಳಲು ಬಂದ ಅರುಣ್ ಸಿಂಗ್ ಅವರು ಮೊದಲಿಗೆ ಭಿನ್ಬಮತೀಯ ಶಾಸಕರ ಅಭಿಪ್ರಾಯವನ್ನು ಕ್ರೋಢೀಕರಿಸಬೇಕಿತ್ತು. ನಂತರ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಪಕ್ಷದ ಶಾಸಕರುಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಸಬೇಕಿತ್ತು. ಇದೆಲ್ಲ ಮುಗಿದ ಬಳಿಕ ಅವರು ತನ್ನ ಅಭಿಪ್ರಾಯ ಮಂಡಿಸಬೇಕಿತ್ತು. ಅದೆಲ್ಲ ಬಿಟ್ಟು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಕಾಲಿಡುತ್ತಿದ್ದಂತೆ ‘ಯಡಿಯೂರಪ್ಪ ಸೇಫ್’ ಅಂತ ಘೋಷಿಸಿಯೇ ಬಿಟ್ಟರು. ಯಡಿಯೂರಪ್ಪ ಸರಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಕೊರೊನಾವನ್ನು ಚೆನ್ನಾಗಿ ನಿರ್ವಹಿಸುತ್ತಿದೆ ಎಂದು 

ಹೇಳುವುದಾದರೆ ಅವರು ರಾಜ್ಯಕ್ಕೆ ಬರುವ ಅವಶ್ಯಕತೆ ಏನಿತ್ತು?  ದಿಲ್ಲಿಯಲ್ಲೇ ಕುಳಿತು ಈ ಹೇಳಿಕೆಯನ್ನು ನೀಡಬಹುದಿತ್ತಲ್ಲ? ಅದಲ್ಲದೆ ಪ್ರಮುಖ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭೇಟಿಗೆ ಸಮಯ ನೀಡಿದ್ದರೂ ಕೊನೆಯ ಕ್ಷಣದಲ್ಲಿ ಅದನ್ನು ರದ್ದುಪಡಿಸಿದ್ದಾರೆ. ಯತ್ನಾಳ್ ಹೇಳಿಗೆ ನಾವು ಹೆಚ್ಚಿನ ಮಹತ್ವ ನೀಡುವುದಿಲ್ಲ, ನೀವು ಕೂಡ ಬಿಡಬೇಡಿ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದ್ದಾರೆ. ಒಂದು ರೀತಿಯಲ್ಲಿ ಅರುಣ್ ಸಿಂಗ್ ಅವರಿಗೆ ಕರ್ನಾಟಕಕ್ಕೆ ಬಂದ ಉದ್ದೇಶವಾದರೂ ಏನು ಎನ್ನುವುದು ಅವರಿಗೇ ಸ್ಪಷ್ಟವಾಗಿ ಇದ್ದ ಹಾಗೆ ಕಾಣಿಸುತ್ತಿಲ್ಲ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು