3:34 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮೊದಲು ತೀರ್ಪು, ನಂತರ ವಿಚಾರಣೆ: ಇದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಟೈಲ್!

18/06/2021, 08:01

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯ ಬಿಕ್ಕಟ್ಟು ಶಮನ ಮಾಡಲೆಂದು ಆಗಮಿಸಿದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಕೇಳುವ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಉತ್ತಮ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನ ಏರ್ ಫೋರ್ಟ್ ನಲ್ಲೇ ಹೇಳಿಕೆ ನೀಡಿದ್ದರು. ಶಾಸಕರ ಅಭಿಪ್ರಾಯ ಆಲಿಸುವ ಮುನ್ನವೇ ಸಿಂಗ್ ಅವರು ಸರ್ಟಿಫಿಕೇಟ್ ನೀಡಿಯಾಗಿದೆ. ಇದೊಂದು ವಿಚಾರಣೆ ನಡೆಸುವ ಮುನ್ನವೇ ತೀರ್ಪು ಕೊಟ್ಟಂತಾಗಿದೆ.

ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಅಸಮಾಧಾನದ ಕುರಿತು ಅರಿತುಕೊಳ್ಳಲು ಬಂದ ಅರುಣ್ ಸಿಂಗ್ ಅವರು ಮೊದಲಿಗೆ ಭಿನ್ಬಮತೀಯ ಶಾಸಕರ ಅಭಿಪ್ರಾಯವನ್ನು ಕ್ರೋಢೀಕರಿಸಬೇಕಿತ್ತು. ನಂತರ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಪಕ್ಷದ ಶಾಸಕರುಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಸಬೇಕಿತ್ತು. ಇದೆಲ್ಲ ಮುಗಿದ ಬಳಿಕ ಅವರು ತನ್ನ ಅಭಿಪ್ರಾಯ ಮಂಡಿಸಬೇಕಿತ್ತು. ಅದೆಲ್ಲ ಬಿಟ್ಟು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಕಾಲಿಡುತ್ತಿದ್ದಂತೆ ‘ಯಡಿಯೂರಪ್ಪ ಸೇಫ್’ ಅಂತ ಘೋಷಿಸಿಯೇ ಬಿಟ್ಟರು. ಯಡಿಯೂರಪ್ಪ ಸರಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಕೊರೊನಾವನ್ನು ಚೆನ್ನಾಗಿ ನಿರ್ವಹಿಸುತ್ತಿದೆ ಎಂದು 

ಹೇಳುವುದಾದರೆ ಅವರು ರಾಜ್ಯಕ್ಕೆ ಬರುವ ಅವಶ್ಯಕತೆ ಏನಿತ್ತು?  ದಿಲ್ಲಿಯಲ್ಲೇ ಕುಳಿತು ಈ ಹೇಳಿಕೆಯನ್ನು ನೀಡಬಹುದಿತ್ತಲ್ಲ? ಅದಲ್ಲದೆ ಪ್ರಮುಖ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭೇಟಿಗೆ ಸಮಯ ನೀಡಿದ್ದರೂ ಕೊನೆಯ ಕ್ಷಣದಲ್ಲಿ ಅದನ್ನು ರದ್ದುಪಡಿಸಿದ್ದಾರೆ. ಯತ್ನಾಳ್ ಹೇಳಿಗೆ ನಾವು ಹೆಚ್ಚಿನ ಮಹತ್ವ ನೀಡುವುದಿಲ್ಲ, ನೀವು ಕೂಡ ಬಿಡಬೇಡಿ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದ್ದಾರೆ. ಒಂದು ರೀತಿಯಲ್ಲಿ ಅರುಣ್ ಸಿಂಗ್ ಅವರಿಗೆ ಕರ್ನಾಟಕಕ್ಕೆ ಬಂದ ಉದ್ದೇಶವಾದರೂ ಏನು ಎನ್ನುವುದು ಅವರಿಗೇ ಸ್ಪಷ್ಟವಾಗಿ ಇದ್ದ ಹಾಗೆ ಕಾಣಿಸುತ್ತಿಲ್ಲ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು