8:02 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ

12/08/2023, 23:06

ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ್ನಾಂಡಿಸ್, ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ಹಾಗೂ ಹಳೆ ವಿದ್ಯಾರ್ಥಿನಿ ತೇಜಸ್ವಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರೊ. ಎಚ್. ಎಸ್. ಫೆರ್ನಾಂಡಿಸ್ ಮಾತನಾಡಿ ವಿದ್ಯಾರ್ಥಿಗಳು, ಹೆತ್ತವರು, ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ಶಿಸ್ತು ಬಹಳ ಮುಖ್ಯ ಎಂಬ ಸಂದೇಶವನ್ನು ನೀಡಿದರು. ಹಳೆ ವಿದ್ಯಾರ್ಥಿನಿ ತೇಜಸ್ವಿ ತಮ್ಮ 3 ವರ್ಷಗಳ ವಿದ್ಯಾರ್ಥಿ ಜೀವನದ ನೆನಪನ್ನು ಮೆಲುಕು ಹಾಕುತ್ತಾ, ನಾವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಅದೇ ರೀತಿ ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ನಿಹಾರಿಕಾ ಶೆಟ್ಟಿ, ವಾಣಿಜ್ಯ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿದರು. ವಿಜೇತಾ, ವಾಣಿಜ್ಯ ಉಪನ್ಯಾಸಕರು ಸ್ವಾಗತಿಸಿದರು, ಕುಮಾರಿ ಅಲ್ವಿಶಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು