12:28 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ

12/08/2023, 23:06

ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ್ನಾಂಡಿಸ್, ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ಹಾಗೂ ಹಳೆ ವಿದ್ಯಾರ್ಥಿನಿ ತೇಜಸ್ವಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರೊ. ಎಚ್. ಎಸ್. ಫೆರ್ನಾಂಡಿಸ್ ಮಾತನಾಡಿ ವಿದ್ಯಾರ್ಥಿಗಳು, ಹೆತ್ತವರು, ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ಶಿಸ್ತು ಬಹಳ ಮುಖ್ಯ ಎಂಬ ಸಂದೇಶವನ್ನು ನೀಡಿದರು. ಹಳೆ ವಿದ್ಯಾರ್ಥಿನಿ ತೇಜಸ್ವಿ ತಮ್ಮ 3 ವರ್ಷಗಳ ವಿದ್ಯಾರ್ಥಿ ಜೀವನದ ನೆನಪನ್ನು ಮೆಲುಕು ಹಾಕುತ್ತಾ, ನಾವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಅದೇ ರೀತಿ ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ನಿಹಾರಿಕಾ ಶೆಟ್ಟಿ, ವಾಣಿಜ್ಯ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿದರು. ವಿಜೇತಾ, ವಾಣಿಜ್ಯ ಉಪನ್ಯಾಸಕರು ಸ್ವಾಗತಿಸಿದರು, ಕುಮಾರಿ ಅಲ್ವಿಶಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು