9:42 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ

12/08/2023, 23:06

ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ್ನಾಂಡಿಸ್, ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ಹಾಗೂ ಹಳೆ ವಿದ್ಯಾರ್ಥಿನಿ ತೇಜಸ್ವಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರೊ. ಎಚ್. ಎಸ್. ಫೆರ್ನಾಂಡಿಸ್ ಮಾತನಾಡಿ ವಿದ್ಯಾರ್ಥಿಗಳು, ಹೆತ್ತವರು, ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ಶಿಸ್ತು ಬಹಳ ಮುಖ್ಯ ಎಂಬ ಸಂದೇಶವನ್ನು ನೀಡಿದರು. ಹಳೆ ವಿದ್ಯಾರ್ಥಿನಿ ತೇಜಸ್ವಿ ತಮ್ಮ 3 ವರ್ಷಗಳ ವಿದ್ಯಾರ್ಥಿ ಜೀವನದ ನೆನಪನ್ನು ಮೆಲುಕು ಹಾಕುತ್ತಾ, ನಾವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಅದೇ ರೀತಿ ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ನಿಹಾರಿಕಾ ಶೆಟ್ಟಿ, ವಾಣಿಜ್ಯ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿದರು. ವಿಜೇತಾ, ವಾಣಿಜ್ಯ ಉಪನ್ಯಾಸಕರು ಸ್ವಾಗತಿಸಿದರು, ಕುಮಾರಿ ಅಲ್ವಿಶಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು