1:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ

10/03/2024, 21:46

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು.


‘ಯು ಮ್ಯಾಟರ್ ‘ ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಲುಜಿನ ಮಿರಾಂಡ (ನಿರ್ದೇಶಕರು ಯು ಮ್ಯಾಟರ್), ಪ್ರೆಸಿಲ್ಲ ಡಿಸಿಲ್ವಾ, (ಪಾರುಪಾತ್ಯಾಗರಾರು ಯು ಮ್ಯಾಟರ್), ಡಾ. ಮೀನಾ ಲೋಬೊ, (ಪಾರುಪಾತ್ಯಾಗರಾರು ಯು ಮ್ಯಾಟರ್),ಸಿಸ್ಟರ್.ಡಾ.ಲತಾ ಫೆರ್ನಾಂಡಿಸ್ ಎ.ಸಿ. (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜು, ಮೊಡಂಕಾಪು), ವಿಜೇತಾ (ರಾಷ್ಟೀಯಸೇವಾ ಯೋಜನಾಧಿಕಾರಿ), ಸುಚಿಕಾ (ಸಂಯೋಜಕರು ಯೂತ್ ರೆಡ್ ಕ್ರಾಸ್) ಉಪಸ್ಥಿತರಿದ್ದರು.
ಡಾ. ಮೀನಾ ಲೋಬೊ ಸ್ವಯಂ ಸೇವಕರಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿಯೊಂದಿಗೆ ನಡೆದಾಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂಬ ಮಾಹಿತಿ ನೀಡಿದರು.
ಮುಂದಿನ ಕಾರ್ಯಕ್ರಮವನ್ನು ಪ್ರೆಸಿಲ್ಲ ಡಿಸಿಲ್ವಾ ನಡೆಸಿಕೊಟ್ಟರು. ಸಮಾಜದೊಂದಿಗಿನ ನಮ್ಮ ಸಂಬಂಧ ಬಹಳ ಅಗತ್ಯ. ಮತೋರ್ವ ಸಂಪನ್ಮೂಲ ವ್ಯಕ್ತಿ ಸ್ವಪ್ರೀತಿ ಎಂಬ ವಿಷಯದ ಬಗ್ಗೆ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು. ಝೋಹಾರ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೊಸ್ವಿಟ ಸ್ವಾಗತಿಸಿ,ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು