10:26 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

24/09/2023, 21:53

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಇತ್ತೀಚಿಗೆ ಜರುಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿ ಬಂಟ್ವಾಳ ಎಸ್. ವಿ. ಎಸ್ . ಕಾಲೇಜಿನ ಹಿಂದಿ ಉಪನ್ಯಾಸಕಿ ಚಂದ್ರಿಕಾ ಆರ್. ರಾವ್ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿ ಭಾಷೆಯನ್ನು ಆಂಗ್ಲ ಭಾಷೆಯ ಪರ್ಯಾಯವಾಗಿ ಉಪಯೋಗಿಸಿ, ಬೆಳೆಸಬೇಕು ಎಂದರು.


ಕಬೀರದಾಸ್ ರವರ ಜನಪ್ರಿಯ ದೋಹಾಗಳನ್ನು ವಾಚಿಸಿ ಅದರ ಭಾವಾರ್ಥವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅವರು ಹೇಳಿದರು.
ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್, ಹಿಂದಿ ಉಪನ್ಯಾಸಕಿ ಪ್ರೀತಿ ಹಾಗೂ ಕಾರ್ಯದರ್ಶಿ ವಿದ್ಯಾರ್ಥಿನಿ ಶಾಲ್ಮ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಅಲ್ವಿಶಾ ಮತ್ತು ಜೊಸ್ವಿಟ ಹಿಂದಿ ದಿವಸ್ ಗೀತೆಯನ್ನು ಹಾಡಿದರು. ಜ್ಯೋತಿ ಹಿಂದಿ ಭಾಷೆಯ ಮಹತ್ವವನ್ನು ಸಾರುವ ಕವಿತೆಯನ್ನು ವಾಚಿಸಿದರು. ಹಿಂದಿ ಪ್ರಬಂಧ ಹಾಗು ಪಿಕ್ & ಸ್ಪೀಚ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಫಾತಿಮತ್ ನಜ್ಮಿಯ ಕಾರ್ಯಕ್ರಮವನ್ನು ವಿದ್ಯಾರ್ಥಿ ಗಳಾದ ಫಾತಿಮತ್ ನಜ್ಮಿಯ
ನಿರೂಪಿಸಿ, ರಾಮ್ಝೀನ ಸ್ವಾಗತಿಸಿ, ಶಾಲ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು