6:11 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

24/09/2023, 21:53

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಇತ್ತೀಚಿಗೆ ಜರುಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿ ಬಂಟ್ವಾಳ ಎಸ್. ವಿ. ಎಸ್ . ಕಾಲೇಜಿನ ಹಿಂದಿ ಉಪನ್ಯಾಸಕಿ ಚಂದ್ರಿಕಾ ಆರ್. ರಾವ್ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿ ಭಾಷೆಯನ್ನು ಆಂಗ್ಲ ಭಾಷೆಯ ಪರ್ಯಾಯವಾಗಿ ಉಪಯೋಗಿಸಿ, ಬೆಳೆಸಬೇಕು ಎಂದರು.


ಕಬೀರದಾಸ್ ರವರ ಜನಪ್ರಿಯ ದೋಹಾಗಳನ್ನು ವಾಚಿಸಿ ಅದರ ಭಾವಾರ್ಥವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅವರು ಹೇಳಿದರು.
ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್, ಹಿಂದಿ ಉಪನ್ಯಾಸಕಿ ಪ್ರೀತಿ ಹಾಗೂ ಕಾರ್ಯದರ್ಶಿ ವಿದ್ಯಾರ್ಥಿನಿ ಶಾಲ್ಮ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಅಲ್ವಿಶಾ ಮತ್ತು ಜೊಸ್ವಿಟ ಹಿಂದಿ ದಿವಸ್ ಗೀತೆಯನ್ನು ಹಾಡಿದರು. ಜ್ಯೋತಿ ಹಿಂದಿ ಭಾಷೆಯ ಮಹತ್ವವನ್ನು ಸಾರುವ ಕವಿತೆಯನ್ನು ವಾಚಿಸಿದರು. ಹಿಂದಿ ಪ್ರಬಂಧ ಹಾಗು ಪಿಕ್ & ಸ್ಪೀಚ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಫಾತಿಮತ್ ನಜ್ಮಿಯ ಕಾರ್ಯಕ್ರಮವನ್ನು ವಿದ್ಯಾರ್ಥಿ ಗಳಾದ ಫಾತಿಮತ್ ನಜ್ಮಿಯ
ನಿರೂಪಿಸಿ, ರಾಮ್ಝೀನ ಸ್ವಾಗತಿಸಿ, ಶಾಲ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು