3:00 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

24/09/2023, 21:53

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಇತ್ತೀಚಿಗೆ ಜರುಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿ ಬಂಟ್ವಾಳ ಎಸ್. ವಿ. ಎಸ್ . ಕಾಲೇಜಿನ ಹಿಂದಿ ಉಪನ್ಯಾಸಕಿ ಚಂದ್ರಿಕಾ ಆರ್. ರಾವ್ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿ ಭಾಷೆಯನ್ನು ಆಂಗ್ಲ ಭಾಷೆಯ ಪರ್ಯಾಯವಾಗಿ ಉಪಯೋಗಿಸಿ, ಬೆಳೆಸಬೇಕು ಎಂದರು.


ಕಬೀರದಾಸ್ ರವರ ಜನಪ್ರಿಯ ದೋಹಾಗಳನ್ನು ವಾಚಿಸಿ ಅದರ ಭಾವಾರ್ಥವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅವರು ಹೇಳಿದರು.
ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್, ಹಿಂದಿ ಉಪನ್ಯಾಸಕಿ ಪ್ರೀತಿ ಹಾಗೂ ಕಾರ್ಯದರ್ಶಿ ವಿದ್ಯಾರ್ಥಿನಿ ಶಾಲ್ಮ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಅಲ್ವಿಶಾ ಮತ್ತು ಜೊಸ್ವಿಟ ಹಿಂದಿ ದಿವಸ್ ಗೀತೆಯನ್ನು ಹಾಡಿದರು. ಜ್ಯೋತಿ ಹಿಂದಿ ಭಾಷೆಯ ಮಹತ್ವವನ್ನು ಸಾರುವ ಕವಿತೆಯನ್ನು ವಾಚಿಸಿದರು. ಹಿಂದಿ ಪ್ರಬಂಧ ಹಾಗು ಪಿಕ್ & ಸ್ಪೀಚ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಫಾತಿಮತ್ ನಜ್ಮಿಯ ಕಾರ್ಯಕ್ರಮವನ್ನು ವಿದ್ಯಾರ್ಥಿ ಗಳಾದ ಫಾತಿಮತ್ ನಜ್ಮಿಯ
ನಿರೂಪಿಸಿ, ರಾಮ್ಝೀನ ಸ್ವಾಗತಿಸಿ, ಶಾಲ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು