6:33 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು:ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನೆ

17/01/2022, 19:11

ಬಂಟ್ವಾಳ(reporterkarnataka.com):
ಕಾರ್ಮೆಲ್ ಕಾಲೇಜ್ ಮೊಡಂಕಾಪು ರಾಷ್ಟ್ರೀಯ ಸೇವಾ ಯೋಜನಾ ಘಟಕದ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹರಿಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಮಾತನಾಡಿ, ಎನ್ಎಸ್ಎಸ್ ನ ಪ್ರಾಮುಖ್ಯತೆ ಮತ್ತು ಅದರಿಂದ ವ್ಯಕ್ತಿಗೆ ಆಗುವ ಪ್ರಯೋಜನಗಳು ಹಾಗೂ ಸ್ವಾಮಿ ವಿವೇಕಾನಂದರು ರಾಷ್ಟ್ರ ನಿರ್ಮಾಣದಲ್ಲಿ ಯುವಕರನ್ನು ಪ್ರೇರೇಪಿಸಿದ ಬಗೆಯನ್ನು ಸಂಕ್ಷಿಪ್ತವಾಗಿ ತಿಳಿಸಿಕೊಟ್ಟರು.ಹಾಗೂ ಪ್ರಾತ್ಯಕ್ಷಿಕೆಯ ಮೂಲಕ ಎನ್ಎಸ್ಎಸ್ ಧ್ಯೇಯೋದ್ದೇಶವನ್ನು ಪರಿಚಯಿಸಿಕೊಟ್ಟರು

ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ರವರು ಎನ್ಎಸ್ಎಸ್ ನಾಯಕರಿಗೆ ಬ್ಯಾಡ್ಜ್ ಮತ್ತು ಎನ್ಎಸ್ಎಸ್ ಧ್ವಜವನ್ನು ಹಸ್ತಾಂತರಿಸಿ, ಪ್ರಮಾಣ ವಚನವನ್ನು ಬೋಧಿಸಿದರು.
ಅವರು ಅಧ್ಯಕ್ಷೀಯ ನುಡಿಯಲ್ಲಿ ಯುವಜನರ ಭವಿಷ್ಯದಲ್ಲಿ ಎನ್ಎಸ್ಎಸ್ ಹೇಗೆ ಸಹಕಾರಿಯಾಗಿದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು. 

ರಾ.ಸೆ.ಯೋ ಘಟಕದ ನಾಯಕ ಹರ್ಷಿತ್,ನಾಯಕಿ ಶ್ರೀಪ್ರಜ್ಞಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾ.ಸೇ.ಯೋ ಸಹಾಯಕ ಯೋಜನಾಧಿಕಾರಿ ಕೀರ್ತನ್ ವಂದಿಸಿದರು. ದ್ವಿತೀಯ ಬಿಕಾಂ ನಸೀರಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು