9:26 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು:ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನೆ

17/01/2022, 19:11

ಬಂಟ್ವಾಳ(reporterkarnataka.com):
ಕಾರ್ಮೆಲ್ ಕಾಲೇಜ್ ಮೊಡಂಕಾಪು ರಾಷ್ಟ್ರೀಯ ಸೇವಾ ಯೋಜನಾ ಘಟಕದ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹರಿಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಮಾತನಾಡಿ, ಎನ್ಎಸ್ಎಸ್ ನ ಪ್ರಾಮುಖ್ಯತೆ ಮತ್ತು ಅದರಿಂದ ವ್ಯಕ್ತಿಗೆ ಆಗುವ ಪ್ರಯೋಜನಗಳು ಹಾಗೂ ಸ್ವಾಮಿ ವಿವೇಕಾನಂದರು ರಾಷ್ಟ್ರ ನಿರ್ಮಾಣದಲ್ಲಿ ಯುವಕರನ್ನು ಪ್ರೇರೇಪಿಸಿದ ಬಗೆಯನ್ನು ಸಂಕ್ಷಿಪ್ತವಾಗಿ ತಿಳಿಸಿಕೊಟ್ಟರು.ಹಾಗೂ ಪ್ರಾತ್ಯಕ್ಷಿಕೆಯ ಮೂಲಕ ಎನ್ಎಸ್ಎಸ್ ಧ್ಯೇಯೋದ್ದೇಶವನ್ನು ಪರಿಚಯಿಸಿಕೊಟ್ಟರು

ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ರವರು ಎನ್ಎಸ್ಎಸ್ ನಾಯಕರಿಗೆ ಬ್ಯಾಡ್ಜ್ ಮತ್ತು ಎನ್ಎಸ್ಎಸ್ ಧ್ವಜವನ್ನು ಹಸ್ತಾಂತರಿಸಿ, ಪ್ರಮಾಣ ವಚನವನ್ನು ಬೋಧಿಸಿದರು.
ಅವರು ಅಧ್ಯಕ್ಷೀಯ ನುಡಿಯಲ್ಲಿ ಯುವಜನರ ಭವಿಷ್ಯದಲ್ಲಿ ಎನ್ಎಸ್ಎಸ್ ಹೇಗೆ ಸಹಕಾರಿಯಾಗಿದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು. 

ರಾ.ಸೆ.ಯೋ ಘಟಕದ ನಾಯಕ ಹರ್ಷಿತ್,ನಾಯಕಿ ಶ್ರೀಪ್ರಜ್ಞಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.100 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾ.ಸೇ.ಯೋ ಸಹಾಯಕ ಯೋಜನಾಧಿಕಾರಿ ಕೀರ್ತನ್ ವಂದಿಸಿದರು. ದ್ವಿತೀಯ ಬಿಕಾಂ ನಸೀರಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು