1:49 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ‘ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್’ ಪ್ರಶಸ್ತಿ ಪ್ರದಾನ 

11/08/2021, 23:23

ಬಂಟ್ವಾಳ(reporterkarnataka.com): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ  ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ಬಂಟ್ವಾಳ ಮೊಡಂಕಾಪಿನ ಕಾರ್ಮೆಲ್ ಕಾಲೇಜ್ ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಪ್ರದಾನ ಮಾಡಿದರು.
ನಂತರ ಮಾತನಾಡಿದ ಅವರು, ಯುವ ಜನರು ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಲು ಕರೆ ನೀಡಿದರು.

ಕಾರ್ಮೆಲ್ ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಘಿಸಿದರು.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ಕಾಲೇಜುಗಳು ಸ್ಪರ್ಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದುಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ  ಮಂಡಳಿಯ ಸದಸ್ಯ ಮೆಲ್ವಿನ್ ತಿಳಿಸಿದರು. 

ಪ್ರತಿಯೊಂದು ಕಾಲೇಜು ಕೂಡ ಸ್ವಚ್ಛತಾ ಹಾಗೂ ಜಲಶಕ್ತಿ ಯೋಜನೆಯನ್ನು ಕಾಲೇಜಿನಲ್ಲಿ ಕಾರ್ಯರೂಪಕ್ಕೆ ತರಬೇಕೆಂದು ವಿನಂತಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಲತಾ ಫರ್ನಾಂಡಿಸ್ ಎ. ಸಿ., ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿ ನಾಯಕ ಮೆಲ್ವಿನ್ , ನಾಯಕಿ ತೇಜಸ್ವಿ, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಮಧುರಾ ಕೆ, ದೀಪ್ತಿ ಡಿಸೋಜಾ,  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು