11:28 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಒತ್ತಡ ನಿರ್ವಹಣೆ’ ಕುರಿತು ಆನ್ ಲೈನ್ ಜಾಗೃತಿ ಕಾರ್ಯಕ್ರಮ

07/06/2021, 21:20

ಬಂಟ್ವಾಳ(reporterkarnataka news): ಮೊಡಂಕಾಪು ಕಾರ್ಮೆಲ್ ಕಾಲೇಜ್ ಆಶ್ರಯದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ಆನ್ ಲೈನ್ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾತು. 

ದಕ್ಷಿಣ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಜಿಲ್ಲಾ ಯುವ ಸಲಹೆಗಾರ ಶ್ರೀ ಕಾಂತ್ ಪೂಜಾರಿ ಬಿರಾವ್  ಕಾರ್ಯ ಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಒತ್ತಡಗಳನ್ನು ನಾವೇ ಜಯಿಸಲು ವಿವಿಧ ವಿಧಾನ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ಪ್ರಾಮುಖ್ಯತೆಯ ಬಗ್ಗೆ ಅವರು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್ ಎ.ಸಿ ಅವರು ಮಾತನಾಡಿ, ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ಆದಕ್ಕೆ ಸಂಬಂಧಿಸಿದ ಅನಗತ್ಯ ಒತ್ತಡವನ್ನು ತಪ್ಪಿಸಲು ಸಾಮಾನ್ಯ ಜನರಿಗೆ ಜಾಗೃತಿ ಮೂಡಿಸುವ ಮಹತ್ವವನ್ನು ತಿಳಿಸಿದರು.

ಬಂಟ್ವಾಳ ಲಯನ್ ಕ್ಲಬ್ ನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕೂಡ ಉಪಸ್ಥಿತರಿದ್ದರು.
ಕಾರ್ಯಕ್ರಮ ಅಧಿಕಾರಿ ಮಧುರಾ ಕೆ.ಕಾರ್ಯಕ್ರಮ ಆಯೋಜಿಸಿದ್ದರು.
ಸುಮಾರು 100 ಜನ ಈ ಕಾರ್ಯಕ್ರಮದ ಪ್ರಯೋಜನ ವನ್ನು ಪಡೆದರು

ಇತ್ತೀಚಿನ ಸುದ್ದಿ

ಜಾಹೀರಾತು